ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 6 OCTOBER 2023
SHIMOGA : ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ಮನೆಗಳಲ್ಲಿ ಜಾರಿ ನಿರ್ದೇಶನಲಾಯದ (ED raid) ಅಧಿಕಾರಿಗಳು ಸುಮಾರು 11 ಗಂಟೆ ಪರಿಶೀಲನೆ ನಡೆಸಿದರು. ಗುರುವಾರ ಬೆಳಗ್ಗೆ 6.30ರಿಂದ ಸಂಜೆ 5 ಗಂಟೆವರೆಗೆ ಪರಿಶೀಲನೆ ನಡೆಸಿದ್ದಾರೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ತೀರ್ಥಹಳ್ಳಿಯ ಬೆಟ್ಟಮಕ್ಕಿ, ಕರಕುಚ್ಚಿ ಮತ್ತು ಶಿವಮೊಗ್ಗದ ಶರಾವತಿ ನಗರದಲ್ಲಿರುವ ಮನೆಗಳಲ್ಲಿ ಇಡಿ ಅಧಿಕಾರಿಗಳು (ED raid) ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾವುದೆ ಅಕ್ರಮ ಆಸ್ತಿ, ಹಣ ಪತ್ತೆಯಾಗಿಲ್ಲ ಎಂದು ಪ್ರಮಾಣ ಪತ್ರ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇಡಿ ಅಧಿಕಾರಿಗಳ ದಾಳಿ ವೇಳೆ ಮಂಜುನಾಥಗೌಡ ಮತ್ತು ಅವರ ಕುಟುಂಬದವರು ಮನೆಗಳಲ್ಲಿ ಇರಲಿಲ್ಲ. ಆದ್ದರಿಂದ ಮನೆಯಲ್ಲಿದ್ದ ಸಹಾಯಕರ ನೆರವಿನಿಂದ ಪರಿಶೀಲನೆ ನಡೆಸಲಾಯಿತು ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆಗಳ ಮೇಲೆ ಇಡಿ ದಾಳಿ, ಶಿವಮೊಗ್ಗದಲ್ಲಿ ಆಕ್ರೋಶ, ಪ್ರತಿಭಟನಾಕರರು ಹೇಳಿದ್ದೇನು?
ಶಿವಮೊಗ್ಗ ಲೈವ್.ಕಾಂ