SHIVAMOGGA LIVE NEWS | 18 NOVEMBER 2022
SAGARA | ತಮ್ಮ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 20 ದಿನದ ಗಡುವು ನೀಡಲಾಗುತ್ತಿದೆ. ಆ ಬಳಿಕ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುತ್ತದೆ. (20 day deadline)
ರೈತ ಹಾಗೂ ಕೂಲಿ ಕಾರ್ಮಿಕರ ಹಿತರಕ್ಷಣಾ ವೇದಿಕೆ ವತಿಯಿಂದ ಸಾಗರ ತಾಲೂಕು ಆವಿನಹಳ್ಳಿಯಿಂದ ಸಾಗರ ಪಟ್ಟಣದವರೆಗೆ ನಡೆದ ಪಾದಯಾತ್ರೆ ವೇಳೆ ರೈತರು ಸರ್ಕಾರಕ್ಕೆ 20 ದಿನದ ಗಡುವು ನೀಡಿ ಎಚ್ಚರಿಸಿದ್ದಾರೆ.
(20 day deadline)
ರೈತರ ಬೇಡಿಕೆಗಳು ಏನು?
ಎಲೆಚುಕ್ಕೆ ರೋಗಕ್ಕೆ ಪರಿಹಾರ ಕಂಡುಕೊಳ್ಳಬೇಕು. ಅಡಕೆ ಆಮದು ಮಾಡಿಕೊಳ್ಳಲು ನೀಡಿರುವ ಅನುಮತಿ ಹಿಂಪಡೆಯಬೇಕು. ಅಡಕೆ ತೋಟ ಹಾನಿಗೆ ಪರಿಹಾರ ಕೊಡಬೇಕು. ಅಡಕೆ ರೋಗಕ್ಕೆ ಸಂಶೋಧನೆಯನ್ನು ಕೇಂದ್ರ ಸರ್ಕಾರದ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿಗೆ ಹಸ್ತಾಂತರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತರು ಆಗ್ರಹಿಸಿದರು.
(20 day deadline)
ಸುಡು ಬಿಸಿಲಿನಲ್ಲಿ ಪಾದಯಾತ್ರೆ
ಸುಡು ಬಿಸಲಿನಲ್ಲೆ ರೈತರು ಆವಿನಹಳ್ಳಿಯಿಂದ ಸಾಗರದ ತಾಲೂಕು ಕಚೇರಿವರೆಗೆ 12 ಕಿ.ಮೀ ಪಾದಯಾತ್ರೆ ನಡೆಸಿದರು. ಎಲೆಚುಕ್ಕೆ ರೋಗಕ್ಕೆ ತುತ್ತಾಗಿ ಒಣಗಿದ್ದ ಅಡಕೆ ಮರದ ಗರಿಗಳನ್ನು ಮೆರವಣಿಗೆಯಲ್ಲಿ ಹಿಡಿದು ರೈತರು ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು.
ಯಾರೆಲ್ಲ ಏನೇನು ಹೇಳಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಕೊನೆ ಕ್ಷಣದಲ್ಲಿ ಶಾಕ್ ನೀಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ
ನಾಗೇಂದ್ರ ಭಟ್ ಹಳೇ ಇಕ್ಕೇರಿ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ರಾಜಕೀಯ ನಾಯಕರು, ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.