
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಎಂಪಿಎಂ ಕಾರ್ಖಾನೆಗೆ ಲೀಸ್ಗೆ ನೀಡಿದ್ದ ಅರಣ್ಯವನ್ನು ಸರ್ಕಾರ ವಾಪಸ್ ಪಡೆದು, ಖಾಸಗಿ ಪಾಲಾಗದಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿ ನಮ್ಮೂರಿಗೆ ಅಕೇಶಿಯ ಮರ ಬೇಡ ಹೋರಾಟ ಒಕ್ಕೂಟ ಮಾಜಿ ಮಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಶಿವಮೊಗ್ಗದ ಹೆಲಿಪ್ಯಾಡ್ನಲ್ಲಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ ಒಕ್ಕೂಟದ ಸದಸ್ಯರು, ಎಂಪಿಎಂ ಕಾರ್ಖಾನೆ ಸ್ಥಗಿತವಾಗಿದೆ. ಕಾರ್ಖಾನೆಗೆ 20,005.42 ಹೆಕ್ಟೇರ್ ಅರಣ್ಯ ಭೂಮಿಯನ್ನು ಲೀಸ್ಗೆ ನೀಡಲಾಗಿತ್ತು. ಈ ಅರಣ್ಯವನ್ನು ಸರ್ಕಾರ ಹಿಂಪಡೆಯಲು ಒತ್ತಡ ಹೇರಬೇಕು ಎಂದು ಮನವಿ ಮಾಡಿದರು.
ಕಾರ್ಖಾನೆಯ ಖಾಸಗೀಕರಣದ ಹೆಸರಲ್ಲಿ ಅರಣ್ಯ ಖಾಸಗಿ ಪಾಲಾಗುವ ಹುನ್ನಾರ ನಡೆಸಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ಪ್ರಸ್ತಾಪ ಮಾಡಿ, ಅರಣ್ಯವನ್ನು ಉಳಿಸಬೇಕು ಎಂದು ಒಕ್ಕೂಟದ ಸದಸ್ಯರು ಮನವಿ ಮಾಡಿದರು.
ವಕೀಲ ಕೆ.ಪಿ.ಶ್ರೀಪಾಲ್ ನೇತೃತ್ವದ ನಿಯೋಗ ಮನವಿ ಸಲ್ಲಿಸುವ ವೇಳೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






