ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020
ಪಾರ್ಕಿಂಗ್ ಮಾಡಿದ್ದ ವಾಹನವನ್ನು ಹಿಂದಕ್ಕೆ ತೆಗೆಯುವ ವೇಳೆ ಸಂಭವಿಸಿದ ಜಗಳದಿಂದ, ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ ಇವತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆದರೆ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಗಿದೆ.
ಗಾಂಧಿ ಬಜಾರ್ನಲ್ಲಿ ಏನೇನಾಯ್ತು?
- ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲಿನ ಹಲ್ಲೆ ಖಂಡಿಸಿ, ಯುವಕರು ಗಾಂಧಿ ಬಜಾರ್ನಲ್ಲಿ ಗುಂಪುಗೂಡಿದ್ದರು.
- ಗಾಂಧಿ ಬಜಾರ್ನ ಪಾರ್ಕಿಂಗ್ನಲ್ಲಿ ನಿಲ್ಲಿಸಿದ್ದ ವಾಹನವನ್ನು ಹಿಂದಕ್ಕೆ ತೆಗೆಯುತ್ತಿದ್ದ ವೇಳೆ ಗಲಾಟೆಯಾಗಿದೆ.
- ಬಿಗುವಿನ ವಾತವರಣ ನಿರ್ಮಾಣವಾಗಿ, ಗಾಂಧಿ ಬಜಾರ್ನ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ.
ಬಟ್ಟೆ ಮಾರ್ಕೆಟ್ನಲ್ಲಿ ಕಿರಿಕ್
ಈ ಬೆಳವಣಿಗೆ ನಡುವೆ, ಬಟ್ಟೆ ಮಾರುಕಟ್ಟೆಯಲ್ಲಿ ಎರಡು ಗುಂಪಿನ ಯುವಕರ ನಡುವೆ ಗಲಾಟೆಯಾಯ್ತು. ಮೂರ್ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಗುಂಪು ಚದುರಿಸಲು ಯತ್ನ
ಗಲಾಟೆ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಯುವಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದರು. ಇನ್ನು, ಮಾರುಕಟ್ಟೆಗೆ ಬಂದವರು, ಅಕ್ಕಪಕ್ಕದ ಏರಿಯಾದ ಜನರು ಅಲ್ಲಿ ಸೇರಿದರು. ಪರಿಸ್ಥಿತಿ ಕೈ ಮೀರುವುದನ್ನು ತಪ್ಪಿಸಲು, ಪೊಲೀಸರು ಗುಂಪು ಚದುರಿಸಿ, ಪರಿಸ್ಥಿತಿ ತಿಳಿಗೊಳಿಸಲು ಹರಸಾಹಸಪಟ್ಟರು.
VIDEO REPORT
ಸಮಾಧನಪಡಿಸಿದ ಪೊಲೀಸರು
ಆಕ್ರೋಶಗೊಂಡಿದ್ದ ಬಜರಂಗದಳ ಕಾರ್ಯಕರ್ತರನ್ನು ಪೊಲೀಸರು ಸಮಾಧಾನಪಡಿಸಲು ಯತ್ನಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಕೈಗೊಂಡರು. ಈ ನಡುವೆ ತಹಶೀಲ್ದಾರ್ ನಾಗರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದರು.
ಬಜರಂಗದಳ ಮುಖಂಡರ ಜೊತೆಗೆ ಚರ್ಚೆ ನಡೆಸಿದ ಪೊಲೀಸರು, ಗುಂಪು ಚದುರಿಸಿದರು. ಸದ್ಯ ಗಾಂಧಿ ಬಜಾರ್ನಲ್ಲಿ ಶಾಂತಿಯುತ ವಾತಾವರಣವಿದೆ. ಯಾವುದೆ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200