ಶಿವಮೊಗ್ಗ ಗಲಭೆ, ಏನೆಲ್ಲ ಬೆಳವಣಿಗೆ ಆಗಿದೆ? ಎಷ್ಟು ಕಿಡಿಗೇಡಿಗಳನ್ನು ವಶಕ್ಕೆ ಪಡೆಯಲಾಗಿದೆ? ಹಲ್ಲೆಯ ತನಿಖೆ ಹೇಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 5 DECEMBER 2020

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ, ಬಳಿಕ ನಡೆದ ಗಲಭೆಯಿಂದಾಗಿ ನಿಷೇಧಾಜ್ಞೆ ವಿಧಿಸಲಾಗಿದೆ. ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಘಟನೆ ಸಂಬಂಧ ಈವರೆಗೂ ಏನೆಲ್ಲ ಬೆಳವಣಿಗೆಯಾಗಿದೆ?

ಹೊರ ಜಿಲ್ಲೆಯ ಪೊಲೀಸ್

ಶಿವಮೊಗ್ಗ ನಗರದಲ್ಲಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ದಾವಣಗೆರೆ, ಚಿತ್ರದುರ್ಗ, ಹಾವೇರಿಯಿಂದ ಹೆಚ್ಚುವರಿಯಾಗಿ ಪೊಲೀಸರನ್ನು ಕರೆಯಿಸಲಾಗಿದೆ.

ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶ

ಶಿವಮೊಗ್ಗ ನಗರದಲ್ಲಿ 148 ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. 9 ಚೆಕ್‍ ಪೋಸ್ಟ್‍ ಸ್ಥಾಪಿಸಲಾಗಿದೆ. ಹೊರ ಜಿಲ್ಲೆಯಿಂದ ಬರುವವರ ಮೇಲೆ ನಿಗಾ ವಹಿಸಲಾಗಿದೆ. 22 ಚೀತಾ ಮತ್ತು 19 ಗಸ್ತು ಸಂಚಾರಿ ವಾಹನಗಳು ನಗರದಾದ್ಯಂತ ನಿಗಾ ವಹಿಸಿವೆ.

041220 Shimoga City Gandhi Bazaar 1 1

62 ಕಿಡಿಗೇಡಿಗಳು ವಶಕ್ಕೆ

ಗಲಭೆ ಸಂಬಂಧ ಪೊಲೀಸರು ಕಾರ್ಯಾಚರಣೆ ನಡೆಸಿ ಈಗಾಗಲೇ 62 ಕಿಡಿಗೇಡಿಗಳನ್ನು ವಶಕ್ಕೆ ಪಡೆದಿದ್ದಾರೆ. ಇವರ ವಿಚಾರಣೆ ನಡೆಯುತ್ತಿದೆ. ಇನ್ನು, ಗಲಭೆಯಲ್ಲಿ 19 ಮಂದಿಗೆ ಗಾಯವಾಗಿದ್ದು, ಅವರಿಗೆ ಚಿಕಿತ್ಸೆ ನಡೆಯುತ್ತಿದೆ.

ವಿಶೇಷ ಮ್ಯಾಜಿಸ್ಟ್ರೇಟ್‍ಗಳ ನೇಮಕ

ಗಲಭೆ ನಿಯಂತ್ರಣಕ್ಕೆ ಪೊಲೀಸ್‍ ಇಲಾಖೆಗೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡುತ್ತಿದೆ. 10 ವಿಶೇಷ ಮ್ಯಾಜಿಸ್ಟ್ರೇಟ್‍ಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.

‘ಹೊಡೆದವರನ್ನು ಗುರುತಿಸಬಲ್ಲೆ’

ಮತ್ತೊಂದೆಡೆ ನಾಗೇಶ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೂರ್ವ ವಲಯ ಐಜಿಪಿ ರವಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಗೇಶ್ ಅವರನ್ನು ಭೇಟಿಯಾಗಿ, ಮಾಹಿತಿ ಪಡೆದರು. ಈ ವೇಳೆ ಹಲ್ಲೆಕೋರರು ಮಾಸ್ಕ್ ಧರಿಸಿದ್ದರು. ಅವರು ಯಾರೆಂದು ಗೊತ್ತಾಗಲಿಲ್ಲ. ಆದರೆ ತೋರಿಸಿದರೆ ಅವರನ್ನು ಗುರುತಿಸಬಲ್ಲೆ ಎಂದು ತಿಳಿಸಿದ್ದಾರೆ ಎಂದು ಐಜಿಪಿ ರವಿ ಅವರು ತಿಳಿಸಿದ್ದಾರೆ.

ಐಜಿಪಿ ನೇತೃತ್ವದಲ್ಲಿ ಶಾಂತಿ ಸಭೆ

ಶಿವಮೊಗ್ಗದಲ್ಲಿ ಶಾಂತಿ ಕಾಪಾಡುವ ಸಲುವಾಗಿ ಐಜಿಪಿ ರವಿ ಅವರು ಶಾಂತಿ ಸಭೆ ನಡೆಸಿದರು. ವಿವಿಧ ಸಮಾಜದ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಂತಿ ನೆಲೆಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಐಜಿಪಿ ಸೂಚಿಸಿದರು.

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment