ಶಿವಮೊಗ್ಗ ಲೈವ್.ಕಾಂ | SHIMOGA NEWS | 15 DECEMBER 2020
ಸಾರಿಗೆ ನೌಕರರ ಮುಷ್ಕರದ ಗೊಂದಲ ಮುಂದುವರೆದಿದೆ. ಈ ನಡುವೆ ಶಿವಮೊಗ್ಗ ಬಸ್ ನಿಲ್ದಾಣದಿಂದ ಕೆಲವೆಡೆ ಬಸ್ ಸಂಚಾರ ಆರಂಭವಾಗಿದೆ.
ಭದ್ರಾವತಿ, ಮಣಿಪಾಲಕ್ಕೆ ಬಸ್
ಶಿವಮೊಗ್ಗದಿಂದ ವಿವಿಧೆಡೆಗೆ ಕೆಎಸ್ಆರ್ಟಿಸಿ ಬಸ್ ಸಂಚರಿಸುತ್ತಿವೆ. ಶಿವಮೊಗ್ಗ – ಭದ್ರಾವತಿ, ಶಿವಮೊಗ್ಗ – ಮಣಿಪಾಲ ರೂಟ್ನಲ್ಲಿ ಬಸ್ಸುಗಳು ಸಂಚರಿಸುತ್ತಿವೆ. ಉಳಿದಂತೆ ಮೈಸೂರು, ಚಿತ್ರದುರ್ಗ, ಹೊನ್ನಾಳಿ, ಶಿಕಾರಿಪುರದ ಕಡೆಗೆ ಬಸ್ಸುಗಳು ತೆರಳಿವೆ.
ಇದನ್ನೂ ಓದಿ | ಮುಷ್ಕರ ನಿಂತಿದೆ ಅಂತಾ ಶಿವಮೊಗ್ಗ ಬಸ್ ನಿಲ್ದಾಣಕ್ಕೆ ಬಂದ ಪ್ರಯಾಣಿಕರಿಗೆ ಕಾದಿತ್ತು ಶಾಕ್
16 ಬಸ್ಗಳಷ್ಟೇ ರಸ್ತೆಗಿಳಿದಿವೆ
ಶಿವಮೊಗ್ಗ ವಿಭಾಗದಲ್ಲಿ 330 ಬಸ್ಸುಗಳಿವೆ. ಮುಷ್ಕರದ ಅನಿಶ್ಚಿತತೆಯಿಂದಾಗಿ ಇವತ್ತು 16 ಬಸ್ಸುಗಳು ಮಾತ್ರ ರಸ್ತೆಗಿಳಿದಿವೆ. ಮುಷ್ಕರ ನಿಲ್ಲುತ್ತದೆಯೋ, ಮುಂದುವರೆಯುತ್ತದೆಯೋ ಎಂಬ ಗೊಂದಲದಿಂದಾಗಿ ಸಾರಿಗೆ ಇಲಾಖೆ ನೌಕರರು ನಿಲ್ದಾಣದ ಕಡೆಗೆ ಮುಖ ಮಾಡಿಲ್ಲ.
ಇದನ್ನೂ ಓದಿ | ಶಿವಮೊಗ್ಗ – ಭದ್ರಾವತಿ ಕೆಎಸ್ಆರ್ಟಿಸಿ ಬಸ್ಗಳಿಗೆ ಜೀಪ್ನಲ್ಲಿ ಎಸ್ಕಾರ್ಟ್, ಏನಿದು ಎಸ್ಕಾರ್ಟ್? ಕಾರಣವೇನು?
ನಿಲ್ದಾಣ ಖಾಲಿ ಖಾಲಿ
ಮುಷ್ಕರದಿಂದಾಗಿ ಬಸ್ಸುಗಳು ಸಂಚರಿಸದ ಹಿನ್ನೆಲೆ ಶಿವಮೊಗ್ಗ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದೆ. ಪ್ರಯಾಣಿಕರು ಇಲ್ಲದೆ, ಬಸ್ಸುಗಳೂ ಇಲ್ಲದೆ ನಿಲ್ದಾಣ ಬಣಗುಡುತ್ತಿದೆ.
ಇದನ್ನೂ ಓದಿ | ಸರ್ಕಾರಿ ಬಸ್ ಬಂದ್, ಶಿವಮೊಗ್ಗದಿಂದ ವಿವಿಧೆಡೆಗೆ ಖಾಸಗಿ ಬಸ್ ಸಂಚಾರ ಶುರು, ಎಲ್ಲಿಗೆಲ್ಲ ತೆರಳುತ್ತಿವೆ ಬಸ್ಸುಗಳು?
ರಾತ್ರಿ ಹೇಗಿತ್ತು ಬಸ್ ನಿಲ್ದಾಣ? ಏನಾಯ್ತು? ಇಲ್ಲಿದೆ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200