| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020
ವಿದೇಶದಿಂದ ಶಿವಮೊಗ್ಗಕ್ಕೆ ಹಿಂತಿರುಗಿದ್ದ ನಾಲ್ವರಲ್ಲಿ ರೂಪಾಂತರಿ ಕರೋನ ವೈರಸ್ ಕಾಣಿಸಿಕೊಂಡಿದೆ. ಹಾಗಾಗಿ ಅವರ ಮನೆಯನ್ನು ಇವತ್ತು ಮತ್ತೊಮ್ಮೆ ಸ್ಯಾನಿಟೈಸ್ ಮಾಡಲಾಯಿತು.
ಟೈಮ್ ಲೈನ್
ಡಿಸೆಂಬರ್ 22 : ರಾತ್ರಿ ಬ್ರಿಟನ್ನಿಂದ ನಾಲ್ಕು ಮಂದಿ ಶಿವಮೊಗ್ಗಕ್ಕೆ ಬಂದಿದ್ದರು.
ವೀರ ಸಾವರ್ಕರ್ ನಗರದಲ್ಲಿರುವ ಮನೆಗೆ ಬಂದಿದ್ದ ಇವರು ಮನೆಯಲ್ಲಿ ರಾತ್ರಿ ಉಳಿದಿದ್ದರು.
ಡಿಸೆಂಬರ್ 23 : ಬೆಳಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಇವರನ್ನು ಕರೋನ ಪರೀಕ್ಷೆಗೆ ಒಳಪಡಿಸಿದಾಗ, ಸೋಂಕು ದೃಢಪಟ್ಟಿತ್ತು.
ಪಾಸಿಟಿವ್ ಬಂದ ಹಿನ್ನೆಲೆ ಬ್ರಿಟನ್ನಿಂದ ಬಂದಿದ್ದ ನಾಲ್ವರ ಸ್ಯಾಂಪಲ್ಗಳನ್ನು ಬೆಂಗಳೂರಿಗೆ ಕಳುಹಿಸಲಾಯಿತು.
ಅದೇ ದಿನ ಮನೆಯನ್ನು ಸೀಲ್ ಡೌನ್ ಮಾಡಿ, ಸ್ಯಾನಿಟೈಸ್ ಮಾಡಲಾಯಿತು.
ಪ್ರಾಥಮಿಕ ಸಂಪರ್ಕದಲ್ಲಿ ಇರುವವರನ್ನು ಕರೋನ ಪರೀಕ್ಷೆಗೆ ಒಳಪಡಿಸಲಾಯಿತು.
ಡಿಸೆಂಬರ್ 23ರಿಂದ ಜನವರಿ 5ರವರೆಗೆ ಯಾರೂ ಮನೆ ಪ್ರವೇಶಿಸದಂತೆ ಗೇಟ್ ಮುಂದೆ ಸ್ಟಿಕ್ಕರ್ ಅಂಟಿಸಲಾಗಿದೆ.
ಇದನ್ನೂ ಓದಿ | BREAKING NEWS | ಶಿವಮೊಗ್ಗದ ನಾಲ್ಕು ಮಂದಿಯಲ್ಲಿ ರೂಪಾಂತರಿ ಕರೋನ ವೈರಸ್ ಪತ್ತೆ
ಡಿಸೆಂಬರ್ 30 : ಎರಡು ಹಂತದ ಪರಿಶೀಲನೆ ಬಳಿಕ, ಈ ಮನೆಗೆ ಬಂದಿದ್ದ ನಾಲ್ವರಿಗೆ ರೂಪಾಂತರಿ ಕರೋನ ವೈರಸ್ ತಗುಲಿರುವುದು ದೃಢವಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಘೋಷಣೆ ಮಾಡಿದರು.
ರೂಪಾಂತರಿ ಕರೋನ ತಗುಲಿರುವುದರಿಂದ ವೀರ ಸಾವರ್ಕರ್ ನಗರದಲ್ಲಿರುವ ಮನೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಮತ್ತೊಮ್ಮೆ ಸ್ಯಾನಿಟೈಸ್ ಮಾಡಲಾಯಿತು.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಬ್ರಿಟನ್ ವೈರಸ್, ಆರೋಗ್ಯ ಇಲಾಖೆ ಅಧಿಕಾರಿಗಳ ಮುಂಜಾಗ್ರತೆಯಿಂದ ತಪ್ಪಿತು ದೊಡ್ಡ ಅನಾಹುತ
ವೈರಸ್ನ ಗುಣಲಕ್ಷಣ, ಜನರು ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕುರಿತು ಮಹಾನಗರ ಪಾಲಿಕೆ ವತಿಯಿಂದ ಸಾರ್ವಕರ್ ನಗರದಲ್ಲಿ ಮೈಕ್ ಮೂಲಕ ಅನೌನ್ಸ್ ಮಾಡಲಾಯಿತು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()