ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 02 JANUARY 2021
ಶಿವಮೊಗ್ಗದಲ್ಲಿ ಇವತ್ತು ಕರೋನ ಲಸಿಕೆ ತಾಲೀಮು (ಡ್ರೈ ರನ್) ನಡೆಯಿತು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಡ್ರೈ ರನ್ಗೆ ಚಾಲನೆ ನೀಡಿದರು.
ಏನಿದು ಡ್ರೈ ರನ್?
ಕೋವಿಡ್ ಲಸಿಕೆ ಬಂದಾಗ ಅದನ್ನು ಹಾಕುವ ಕುರಿತು ಕೈಗೊಂಡಿರುವ ಸಿದ್ಧತೆ ಕಾರ್ಯಗಳ ಪರಿಶೀಲನೆಗೆ ತಾಲೀಮು ನಡೆಸಲಾಗುತ್ತಿದೆ. ಆರೋಗ್ಯ ಇಲಾಖೆ, ಮೆಗ್ಗಾನ್ ಆಸ್ಪತ್ರೆಯ ಸಿಬ್ಬಂದಿಗಳನ್ನು ಇದರಲ್ಲಿ ಭಾಗಿಯಾಗಿದ್ದಾರೆ.
ಎಲ್ಲೆಲ್ಲಿ ನಡೆಯುತ್ತಿದೆ ಡ್ರೈ ರನ್
- ಶಿವಮೊಗ್ಗ ಜಿಲ್ಲೆಯ ಮೂರು ಕಡೆಯಲ್ಲಿ ಲಸಿಕೆ ತಾಲೀಮು ನಡೆಯುತ್ತಿದೆ.
- ಶಿವಮೊಗ್ಗ ಸಿಟಿಯಲ್ಲಿ ಮೆಡಿಕಲ್ ಕಾಲೇಜು ಆವರಣ
- ಶಿಕಾರಿಪುರದ ತಾಲೂಕು ಆಸ್ಪತ್ರೆ
- ಭದ್ರಾವತಿ ತಾಲೂಕು ಅಂತರಗಂಗೆ ಪ್ರಾಥಮಿಕ ಆರೋಗ್ಯ ಕೇಂದ್ರ
ಹೇಗೆ ನಡೆಯುತ್ತೆ ಡ್ರೈ ರನ್?
ಡ್ರೈ ರನ್ಗೆ ಪ್ರತಿ ಕೇಂದ್ರದಲ್ಲಿ 25 ಮಂದಿ ಭಾಗಿಯಾಗಿದ್ದಾರೆ. ಜಿಲ್ಲೆಯ ಮೂರು ಕೇಂದ್ರದಲ್ಲಿ 75 ಮಂದಿ ಆರೋಗ್ಯ ಇಲಾಖೆ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.
ವೈದ್ಯರು, ಸಪೋರ್ಟಿಂಗ್ ಟೀಂ ಸೇರಿ 50 ಮಂದಿ ಭಾಗಿಯಾಗಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯ 20 ಸಾವಿರ ಮಂದಿಗೆ ಮೊದಲ ಹಂತದಲ್ಲಿ ಕರೋನ ಲಸಿಕೆ, ಯಾರಿಗೆಲ್ಲ ಸಿಗುತ್ತೆ ಲಸಿಕೆ? ಪೂರೈಕೆ ಹೇಗೆ?
ಡ್ರೈ ರನ್ಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೂರು ಪ್ರತ್ಯೇಕ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ.
ಕೊಠಡಿ 1 : ನಿರೀಕ್ಷಾಣ ರೂಂ – ಲಸಿಕೆ ಪಡೆಯಲು ಬಂದವರ ಮಾಹಿತಿ ಆನ್ಲೈನ್ಗೆ ಅಪ್ಲೋಡ್
ಕೊಠಡಿ 2 : ಚುಚ್ಚುಮದ್ದು ಕೊಠಡಿ – ಇಲ್ಲಿ ಫಲಾನುಭವಿಗಳಿಗೆ ಲಸಿಕೆ ನೀಡಲಾಗುತ್ತದೆ.
ಕೊಠಡಿ 3 : ಪರೀಕ್ಷಾ ಕೊಠಡಿ – ಲಸಿಕೆ ಪಡೆದ ಫಲಾನುಭವಿಗಳನ್ನು ಕೆಲ ಹೊತ್ತು ವಿಶ್ರಾಂತಿಗೆ ಸೂಚಿಸಿ, ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಅಡ್ಡ ಪರಿಣಾಮಗಳು ಉಂಟಾದಲ್ಲಿ ಕೂಡಲೇ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ.
ಇದನ್ನೂ ಓದಿ | ಶಿವಮೊಗ್ಗಕ್ಕೆ ಮೊದಲು ಬರುತ್ತೆ ಕರೋನ ಲಸಿಕೆ, ಅಕ್ಕಪಕ್ಕದ ಜಿಲ್ಲೆಗೆ ಇಲ್ಲಿಂದಲೇ ಪೂರೈಕೆ, ಹೇಗಿದೆ ಗೊತ್ತಾ ಲಸಿಕೆ ಸಂಗ್ರಹಕ್ಕೆ ವ್ಯವಸ್ಥೆ?
ಮೆಗ್ಗಾನ್ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೇರಿದಂತೆ, ಆರೋಗ್ಯ ಇಲಾಖೆ, ಸಿಮ್ಸ್ ಆಡಳಿತ ಮಂಡಳಿ, ಅಧಿಕಾರಿಗಳ ತಂಡ ಡ್ರೈ ರನ್ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಡ್ರೈ ರನ್ ಕಾರ್ಯದ ಪರಿಶೀಲನೆ ನಡೆಸಿದರು.
ಇದನ್ನೂ ಓದಿ | ಶಿವಮೊಗ್ಗದ ನಾಲ್ಕು ಮಂದಿಯಲ್ಲಿ ರೂಪಾಂತರಿ ಕರೋನ ವೈರಸ್ ಪತ್ತೆ
ಇದನ್ನೂ ಓದಿ | ಶಿವಮೊಗ್ಗದಲ್ಲಿ ಬ್ರಿಟನ್ ವೈರಸ್, ಆರೋಗ್ಯ ಇಲಾಖೆ ಅಧಿಕಾರಿಗಳ ಮುಂಜಾಗ್ರತೆಯಿಂದ ತಪ್ಪಿತು ದೊಡ್ಡ ಅನಾಹುತ
ಇದನ್ನೂ ಓದಿ | ಶಿವಮೊಗ್ಗದಲ್ಲಿ ರೂಪಾಂತರಿ ವೈರಸ್, ಮನೆ ಮತ್ತೊಮ್ಮೆ ಸ್ಯಾನಿಟೈಸ್, ನಾಲ್ವರು ವಿದೇಶದಿಂದ ಬಂದಿದ್ಯಾವಾಗ?
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















