ಶಿವಮೊಗ್ಗ ಲೈವ್.ಕಾಂ | SHIKARIPURA NEWS | 2 ಜನವರಿ 2021
ಹೊಸ ವರ್ಷಾಚರಣೆ ಕೇಕ್ ಕಟ್ ಮಾಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಹತ್ಯೆ ಮಾಡಲಾಗಿದೆ.
ಮನೋಜ್ (22) ಮೃತ ದುರ್ದೈವಿ. ಈತ ಶಿಕಾರಿಪುರದ ಆಶ್ರಯ ಬಡಾವಣೆಯ ನಿವಾಸಿ. ಇದೆ ಬಡಾವಣೆಯ ಇಸಾಕ್ ಮತ್ತು ಆತನ ಸ್ನೇಹಿತರು ಮನೋಜ್ನ ಹತ್ಯೆ ಮಾಡಿದ್ದಾರೆ.
ಕೇಕ್ ಕಟ್ ವಿಚಾರದಲ್ಲಿ ಕಿರಿಕ್
ಹೊಸ ವರ್ಷಾಚರಣೆಗೆ ಕೇಕ್ ಮಾಡುವ ವಿಚಾರದಲ್ಲಿ ಮನೋಜ್ ಮತ್ತು ಇಸಾಕ್ ನಡುವೆ ಕಿರಿಕ್ ಆಗಿತ್ತು. ಇದೆ ವಿಚಾರವಾಗಿ ಮನೋಜ್ನನ್ನು ಹತ್ಯೆ ಮಾಡಲಾಗಿದೆ. ಘಟನೆ ಸಂಬಂಧ ಇಸಾಕ್ನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಇತರೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಶಿಕಾರಿಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200