GOOD NEWS | ಬಸ್ ನಿಲ್ದಾಣದಲ್ಲಿ ಮಾನಸಿಕ ಅಸ್ವಸ್ಥೆ ಪ್ರತ್ಯಕ್ಷ, ಯುವಕರು, ಅಧಿಕಾರಿಗಳಿಂದ ಬದಲಾಯ್ತು ಆಕೆಯ ಬದುಕು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SAGARA NEWS | 03 JANUARY 2021

ಮಾನಸಿಕ ಅಸ್ವಸ್ಥೆಯೊಬ್ಬಳಿಗೆ ಊಟ, ಬಟ್ಟೆ, ಚಿಕಿತ್ಸೆ ಕೊಡಿಸಿ, ಆಕೆಯನ್ನು ಅನಾಥಶ್ರಮಕ್ಕೆ ಸೇರಿಸಿ ಸಾಗರದ ಯುವಕರ ತಂಡ ಮಾನವೀಯತೆ ಮೆರೆದಿದೆ. ಪೊಲೀಸರು, ಸಾಗರ ನಗರಸಭೆ ಅಧಿಕಾರಿಗಳು ಈ ಕಾರ್ಯದಲ್ಲಿ ಜೊತೆಯಾಗಿದ್ದರು.

ಎಲ್ಲಿ ಇದು? ಯಾರಿದು ಮಹಿಳೆ?

ಸಾಗರದ ಕೆಳದಿ ರಸ್ತೆಯ ರಾಣಿ ಚೆನ್ನಮ್ಮ ಸರ್ಕಲ್‍ನ ಬಸ್‍ ನಿಲ್ದಾಣದ ಬಳಿ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಪತ್ತೆಯಾಗಿದ್ದಾರೆ. ಅವರ ಹೆಸರು, ಊರು ಗೊತ್ತಾಗಿಲ್ಲ. ತೀವ್ರ ಚಳಿ ಮತ್ತು ರಾತ್ರಿ ವೇಳೆ ಮಹಿಳೆಯೊಬ್ಬಳು ಏಕಾಂಗಿಯಾಗಿ ಹೀಗೆ ಪಟ್ಟಣದಲ್ಲಿ ಇರುವುದು ಸುರಕ್ಷಿತವಲ್ಲ ಎಂದು ಮನಗಂಡ ಯುವಕರ ತಂಡ, ಆಕೆಯ ರಕ್ಷಣೆ ಮಾಡಿ, ಪೊಲೀಸರ ನೆರವಿನೊಂದಿಗೆ ಅನಾಥಾಶ್ರಮಕ್ಕೆ ಸೇರಿಸಿದ್ದಾರೆ.

ನೆರವಾದ ಸೋಷಿಯಲ್ ಟೀಂ

ದಲಿತ ಸಂಘರ್ಷ ಸಮಿತಿಯ ನಾಗರಾಜ್ ಅವರು ಮಹಿಳೆಯನ್ನು ಗಮನಿಸಿ, ಊಟ, ಬಟ್ಟೆ ವ್ಯವಸ್ಥೆ ಮಾಡಿದರು. ಸೋಷಿಯಲ್ ಟೀಂನ ಪತ್ರಕರ್ತ ಇಮ್ರಾನ್ ಸಾಗರ್ ಅವರಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ಸ್ಥಿತಿ ಕಂಡು ಕೂಡಲೆ ಕಾರ್ಯಪ್ರವೃತ್ತರಾದ ಇಮ್ರಾನ್ ಸಾಗರ್, ಪೊಲೀಸರು ಮತ್ತು ಸಾಗರ ನಗರಸಭೆಗೆ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲದೆ ತಮ್ಮ ಪರಿಚಿತ ಸಿದ್ದಾಪುರದ ಪ್ರಚಲಿತ ಆಶ್ರಯಧಾಮ ಅನಾಥಾಶ್ರಮದ ಮುಖ್ಯಸ್ಥ ನಾಗರಾಜ್ ನಾಯ್ಕ್ ಅವರನ್ನು ಸಂಪರ್ಕಿಸಿ, ಮಹಿಳೆಯನ್ನು ಅಲ್ಲಿಗೆ ಸೇರಿಸಿದ್ದಾರೆ.

ಇನ್ಸ್‍ಪೆಕ್ಟರ್ ಅಶೋಕ್ ಕುಮಾರ್, ನಗರಸಭೆ ಆಯುಕ್ತ ನಾಗಪ್ಪ, ಪೋಲೀಸ್ ಸಿಬ್ಬಂದಿಗಳಾದ ಪ್ರತಿಭಾ, ಮಲ್ಲೇಶ್, ಸಂತೋಷ್ ಹಾಗೂ ಸೋಶಿಯಲ್ ಟೀಂನ ಅಣಲೇಕೊಪ್ಪದ ಅಬ್ಬಾಸ್, ಆಂಬುಲೆನ್ಸ್ ಫಯಾಜ್, ಬೆಂಗಳೂರಿನ ಜಾಕಿರ್ ಈ ಕಾರ್ಯದಲ್ಲಿ ಜೊತೆಯಾಗಿದ್ದರು.

134664933 1301547873539963 1469359939030016371 o.jpg? nc cat=102&ccb=2& nc sid=730e14& nc ohc=VG7wagdVjHEAX85Yq7E& nc ht=scontent.fblr1 6

133828882 1301547853539965 4419639196107870744 o.jpg? nc cat=103&ccb=2& nc sid=730e14& nc ohc=7qpMcpgvVy0AX87TS17& nc ht=scontent.fblr1 5

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment