ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021
ಭದ್ರಾವತಿಯಲ್ಲಿ ಕ್ಷಿಪ್ರ ಕಾರ್ಯಪಡೆ (ಆರ್ಎಎಫ್) ಘಟಕ ಸ್ಥಾಪನೆ ಬಿಜೆಪಿಯ ಸಾಧನೆಯಲ್ಲ. ಹಿಂದಿನ ಕಾಂಗ್ರೆಸ್ ಸರ್ಕಾರದ ಕೊಡುಗೆ ಅಂತಾ ಶಾಸಕ ಸಂಗಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಗಮೇಶ್ವರ್, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ಕೋಲಾರದ ಕೆಜಿಎಫ್ನಲ್ಲಿ ಆರ್ಎಎಫ್ ಘಟಕ ಸ್ಥಾಪನೆಗೆ ನಿರ್ಧರಿಸಲಾಗಿತ್ತು. ಆ ಸಂದರ್ಭ ಘಟಕವನ್ನು ಭದ್ರಾವತಿಯಲ್ಲಿ ಸ್ಥಾಪಿಸುವಂತೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿ ಭದ್ರಾವತಿಯಲ್ಲಿ ಘಟಕ ಸ್ಥಾಪನೆಗೆ ಮನವಿ ಮಾಡಲಾಗಿತ್ತು. ಆದರೆ ಕಾರಣಾಂತರಗಳಿಂದ ಕೆಲಸ ಆರಂಭವಾಗಿರಲಿಲ್ಲ.
ಆಹ್ವಾನ ಬಂದಿಲ್ಲ
ಆರ್ಎಎಫ್ ಘಟಕದ ಶಂಕುಸ್ಥಾಪನೆಗೆ ಭದ್ರಾವತಿಗೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಸ್ವಾಗತ ಕೋರುತ್ತೇನೆ ಎಂದು ತಿಳಿಸಿದ ಸಂಗಮೇಶ್ವರ್ ಅವರು, ಕಾರ್ಯಕ್ರಮಕ್ಕೆ ತಮಗೆ ಆಹ್ವಾನ ಬಂದಿಲ್ಲ ಎಂದರು. ಆಹ್ವಾನ ಬಂದರೆ ಹೋಗುತ್ತೇನೆ. ರಾಜ್ಯ ಸರ್ಕಾರ ಜಾಗ ಕೊಡುತ್ತಿರುವುದರಿಂದ ಕ್ಷೇತ್ರದ ಜನಪ್ರತಿನಿಧಿಯಾದ ತಮಗೆ ಆಹ್ವಾನ ನೀಡಬೇಕು. ಆದರೆ ಈತನಕ ಆಹ್ವಾನ ಬಂದಿಲ್ಲ ಎಂದರು.
ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ.ಚಂದ್ರೇಗೌಡ, ಗ್ರಾಮಾಂತರ ಅಧ್ಯಕ್ಷ ಹೆಚ್.ಎಲ್.ಷಡಾಕ್ಷರಿ, ಮಂಜುಳಮ್ಮ, ಬಿ.ಟಿ.ನಾಗರಾಜ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















