ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021
ಅಪರಾಧ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಖಡಕ್ ವರ್ನಿಂಗ್ ನೀಡಲು ಶಿವಮೊಗ್ಗ ಪೊಲೀಸರು ರೌಡಿ ಪರೇಡ್ ನಡೆಸಿದರು. 170ಕ್ಕೂ ಹೆಚ್ಚು ರೌಡಿಗಳು ಪರೇಡ್ನಲ್ಲಿದ್ದರು.
ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ
ಖಡಕ್ ವಾರ್ನಿಂಗ್ ಕೊಟ್ಟ ಎಸ್ಪಿ
ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ರೌಡಿಗಳ ಕೇಸ್ಗಳ ಮಾಹಿತಿ ಪಡೆದು, ಚಟುವಟಿಕೆ ನಿಲ್ಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಯಾವುದೆ ರೀತಿಯ ರೌಡಿ ಚಟವಟಿಕೆ ನಡೆಸದಂತೆ ವಾರ್ನಿಂಗ್ ಕೊಟ್ಟರು.
ಬಾರ್, ಟೀ ಅಂಗಡಿ ಮುಂದೆ ನಿಲ್ಲಂಗಿಲ್ಲ
ಬಾರ್ ಒಂದರಲ್ಲಿ ಇತ್ತೀಚೆಗೆ ಗಲಾಟೆಯಾಗಿ, ಯುವಕನೊಬ್ಬನ ಹತ್ಯೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಬಾರ್ಗಳಲ್ಲಿ ಕುಡಿದು ಕಿರಿಕ್ ಮಾಡುವ ರೌಡಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ರಕ್ಷಣಾಧಿಕಾರಿ ಎಚ್ಚರಿಕೆ ನೀಡಿದರು. ಟೀ ಅಂಗಡಿ ಮುಂದೆ ಗುಂಪುಗೂಡಿ ಗಲಾಟೆ ಮಾಡುವುದು ಸೇರಿದಂತೆ ಶಾಂತಿ ಕದಡುವವರ ವಿರುದ್ಧ ಕೇಸ್ ದಾಖಲಿಸಲಾಗುತ್ತದೆ ಎಂದರು. ಇನ್ಮುಂದೆ ಟೀ ಅಂಗಡಿಗಳ ಮುಂದೆ ಸಿಸಿಟಿವಿ ಅಳವಡಿಸಬೇಕು. ಈ ಸಂಬಂಧ ಪೊಲೀಸ್ ಸಿಬ್ಬಂದಿಗಳು ಟೀ ಅಂಗಡಿ ಮಾಲೀಕರ ಮನವೊಸಲಿಸಬೇಕು ಎಂದರು.
ಶಿವಮೊಗ್ಗ ಉಪ ವಿಭಾಗದ ದೊಡ್ಡಪೇಟೆ, ಕೋಟೆ, ಜಯನಗರ , ವಿನೋಬನಗರ, ಶಿವಮೊಗ್ಗ ಗ್ರಾಮಾಂತರ, ತುಂಗಾ ನಗರ, ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಗಳು ಪರೇಡ್ನಲ್ಲಿದ್ದರು.
VIDEO REPORT
ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಡಿವೈಎಸ್ಪಿ ಉಮೇಶ್ ನಾಯ್ಕ್ ಸೇರಿದಂತೆ ಇನ್ಸ್ಪೆಕ್ಟರ್ಗಳು, ಸಬ್ ಇನ್ಸ್ಪೆಕ್ಟರ್ಗಳು ಸೇರಿದಂತೆ ವಿವಿಧ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















