ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 MARCH 2021
ಎಟಿಎನ್ಸಿಸಿ ಸಂಜೆ ಕಾಲೇಜು ವಿದ್ಯಾರ್ಥಿಗಳು ಈಚೆಗೆ ನಡೆದ ಸಿಎ ಫೌಂಡೇಷನ್ ಹಾಗೂ ಸಿಎಸ್ ಇಇಟಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.
ಮಜೋಜ್ ಕೆ, ವಲ್ಲಿಶ.ಎಸ್, ಅನಘ.ಪಿ, ಸಂಜನಾ.ಜೆ, ಪಿ.ಸಹನಾ, ಶ್ರೀ ಭಾರ್ಗವಿ ಬಾಸ್ಕರ್ ಸಿಎ ಫೌಂಡೇಷನ್ನಲ್ಲಿ ಹಾಗೂ ವಿಷ್ಣ್.ಎಚ್.ಎ, ಗಣೇಶ್ ನಾಯಕ್ ಸಿಎಸ್ ಇಇಟಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಎಟಿಎನ್ಸಿ ಕಾಲೇಜು ಬಿ.ಕಾಂ ಸಂಜೆ ಕಾಲೇಜಿನಲ್ಲಿ ಬೆಳಗ್ಗಿನ ಕಾಲೇಜಿನಲ್ಲಿ ನೀಡುತ್ತಿರುವ ಎಲ್ಲ ಸೌಲಭ್ಯಗಳಿದ್ದು, ಕಡಿಮೆ ಶುಲ್ಕ ವಿಧಿಸಲಾಗುತ್ತಿದೆ. ಓದುವ ಹಾಗೂ ಉದ್ಯೋಗ ಮಾಡಿಕೊಂಡು ಕೆಲಸ ಮಾಡುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ.
ಪ್ರಸ್ತುತ 115 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಅದರಲ್ಲಿ 44 ವಿದ್ಯಾರ್ಥಿನಿಯರು ಇರುವುದು ಮತ್ತೊಂದು ವಿಶೇಷ.
ಎಟಿಎನ್ಸಿ ಸಂಜೆ ಕಾಲೇಜು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಯಶಸ್ ಅಕಾಡೆಮಿ ಜತೆ ಒಪ್ಪಂದ ಮಾಡಿಕೊಂಡಿದ್ದು, ಬೆಳಗ್ಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ, ಸಂಜೆ ಬಿ.ಕಾಂ ಶಿಕ್ಷಣ ನಡೆಯುತ್ತಿದೆ. ಜನವರಿ 2021ರಲ್ಲಿ ನಡೆದ ಪರೀಕ್ಷೆಯಲ್ಲಿ 8 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಪ್ರಾಂಶುಪಾಲ ಬಿ.ಆರ್.ದಯಾನಂದ ತಿಳಿಸಿದ್ದು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- BREAKING NEWS – ಕಾಂಪೌಂಡ್ ಹಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

- ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

- ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಸಂಘದ ಸಾಲದ ಹೆಸರಲ್ಲಿ ನಡೆಯಿತು ಮಹಾ ವಂಚನೆ, ಆಗಿದ್ದೇನು?

- ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್ ಶಾಕ್, ಆಗಿದ್ದೇನು?

- ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

About The Editor
ನಿತಿನ್ ಆರ್.ಕೈದೊಟ್ಲು
















