ಬೇಸಿಗೆ ಮುಗಿಯೋವರೆಗೆ ಶಿವಮೊಗ್ಗದಲ್ಲಿ ಹೆಲ್ಮೆಟ್ಗೆ ದಂಡ ಬೇಡ, ಪೊಲೀಸರಿಗೆ ಮನವಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಬಿಸಿಲಿನ ಧಗೆ ಹೆಚ್ಚಾಗಿರುವುದರಿಂದ  ಹೆಲ್ಮೆಟ್ ಧರಿಸಲು ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ ರಾಜ್ಯ ನಾಗರೀಕ ರಕ್ಷಣಾ ಸಮಿತಿ ವತಿಯಿಂದ  ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ ನಗರದಲ್ಲಿ ಬಿಸಿಲಿನ ಧಗೆ ದಿನೇ ದಿನೇ ಹೆಚ್ಚುತ್ತಿದೆ. ಆದ್ದರಿಂದ ಜನಸಾಮಾನ್ಯರು ಪರದಾಡುವಂತಾಗಿದೆ. ಬಿಸಿಲು ಇರುವ ಸಂದರ್ಭದಲ್ಲಿ ಹೆಲ್ಮೆಟನ್ನು ಧರಿಸಿರುವಾಗ ಅಲರ್ಜಿ ಸೇರಿದಂತೆ ನಾನಾ ಸಮಸ್ಯೆಗಳು ಹೆಚ್ಚಾಗುತ್ತಿವೆ ಹಾಗೂ ಹಿರಿಯ ನಾಗರೀಕರು ಬಿಸಿಲಿನಲ್ಲಿ ಹೆಲ್ಮೆಟ್ ಧಾರಣೆ ಮಾಡಿ ಪ್ರಯಾಣಿಸುವಾಗ ತಲೆಸುತ್ತು ಬರುವಂತಹ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದು ತಿಳಿಸಿದರು.

ದೂರ ಪ್ರಯಾಣ ಮಾಡುವ ಸ್ಥಳಗಳಲ್ಲಿ ಹೆಲ್ಮೆಟ್ ಪರಿಶೀಲನೆ ಮುಂದುವರಿಸಿ ನಗರ ವ್ಯಾಪ್ತಿಗಳಲ್ಲಿ ಹೆಲ್ಮೆಟ್‍ಗೆ ವಿನಾಯಿತಿ ನೀಡಬೇಕು. ಹೆಲ್ಮೆಟ್ ತಪಾಸಣೆ  ಬದಲಾಗಿ ವೇಗ ಮಿತಿಯನ್ನು ಪರಿಶೀಲಿಸಲು ಸೂಚಿಸಬೇಕು  ಎಂದು ಮನವಿ ಮಾಡಿದರು.

ರಾಜ್ಯ ನಾಗರಿಕರ ರಕ್ಷಣಾ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ರಾಘವೇಂದ್ರ, ಗೌರವಾಧ್ಯಕ್ಷ ಲಕ್ಷ್ಮೀಕಾಂತ, ಉಪಾಧ್ಯಕ್ಷ ಕೆ ಶೇಖರ್, ಸಹ ಕಾರ್ಯದರ್ಶಿ ವಿನೋದ್, ಶಂಭುಲಿಂಗ, ಹರೀಶ್, ಮಲ್ಲೇಶಪ್ಪ, ಕುಬೇರ,ಷಣ್ಮುಖ ಇದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment