ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021
ಬಿಸಿಲಿನ ಧಗೆ ಹೆಚ್ಚಾಗಿರುವುದರಿಂದ ಹೆಲ್ಮೆಟ್ ಧರಿಸಲು ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ ರಾಜ್ಯ ನಾಗರೀಕ ರಕ್ಷಣಾ ಸಮಿತಿ ವತಿಯಿಂದ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ನಗರದಲ್ಲಿ ಬಿಸಿಲಿನ ಧಗೆ ದಿನೇ ದಿನೇ ಹೆಚ್ಚುತ್ತಿದೆ. ಆದ್ದರಿಂದ ಜನಸಾಮಾನ್ಯರು ಪರದಾಡುವಂತಾಗಿದೆ. ಬಿಸಿಲು ಇರುವ ಸಂದರ್ಭದಲ್ಲಿ ಹೆಲ್ಮೆಟನ್ನು ಧರಿಸಿರುವಾಗ ಅಲರ್ಜಿ ಸೇರಿದಂತೆ ನಾನಾ ಸಮಸ್ಯೆಗಳು ಹೆಚ್ಚಾಗುತ್ತಿವೆ ಹಾಗೂ ಹಿರಿಯ ನಾಗರೀಕರು ಬಿಸಿಲಿನಲ್ಲಿ ಹೆಲ್ಮೆಟ್ ಧಾರಣೆ ಮಾಡಿ ಪ್ರಯಾಣಿಸುವಾಗ ತಲೆಸುತ್ತು ಬರುವಂತಹ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದು ತಿಳಿಸಿದರು.
ದೂರ ಪ್ರಯಾಣ ಮಾಡುವ ಸ್ಥಳಗಳಲ್ಲಿ ಹೆಲ್ಮೆಟ್ ಪರಿಶೀಲನೆ ಮುಂದುವರಿಸಿ ನಗರ ವ್ಯಾಪ್ತಿಗಳಲ್ಲಿ ಹೆಲ್ಮೆಟ್ಗೆ ವಿನಾಯಿತಿ ನೀಡಬೇಕು. ಹೆಲ್ಮೆಟ್ ತಪಾಸಣೆ ಬದಲಾಗಿ ವೇಗ ಮಿತಿಯನ್ನು ಪರಿಶೀಲಿಸಲು ಸೂಚಿಸಬೇಕು ಎಂದು ಮನವಿ ಮಾಡಿದರು.
ರಾಜ್ಯ ನಾಗರಿಕರ ರಕ್ಷಣಾ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ರಾಘವೇಂದ್ರ, ಗೌರವಾಧ್ಯಕ್ಷ ಲಕ್ಷ್ಮೀಕಾಂತ, ಉಪಾಧ್ಯಕ್ಷ ಕೆ ಶೇಖರ್, ಸಹ ಕಾರ್ಯದರ್ಶಿ ವಿನೋದ್, ಶಂಭುಲಿಂಗ, ಹರೀಶ್, ಮಲ್ಲೇಶಪ್ಪ, ಕುಬೇರ,ಷಣ್ಮುಖ ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

About The Editor
ನಿತಿನ್ ಆರ್.ಕೈದೊಟ್ಲು
















