ಶಿವಮೊಗ್ಗ ಲೈವ್.ಕಾಂ | SAGARA NEWS | 26 MARCH 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ನಾಟಿ ಔಷಧ ವಿತರಣೆ ಸ್ಥಗಿತಗೊಳಿಸಿದ ಕ್ರಮ ಖಂಡಿಸಿ ಔಷಧ ಪಡೆಯಲು ಬಂದಿದ್ದ ರೋಗಿಗಳು ಮತ್ತು ಸಂಬಂಧಿಕರು ಗುರುವಾರ ಪ್ರತಿಭಟನೆ ನಡೆಸಿದರು. ಆನಂದಪುರ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟಿಸಿದರು.
ಇದನ್ನೂ ಓದಿ | ನರಸೀಪುರದ ನಾಟಿ ಔಷಧ ವಿತರಣೆ ತಾತ್ಕಾಲಿಕ ಮುಂದೂಡಿಕೆ, ಕಾರಣವೇನು? ಮತ್ತೆ ಯಾವಾಗ ಶುರುವಾಗುತ್ತೆ?
ಆನಂದಪುರ ಸಮೀಪ ಶಿವಗಂಗೆಯಲ್ಲಿ ನಾಟಿ ಔಷಧ ವಿತರಣೆ ಮಾಡಲಾಗುತ್ತಿದೆ. ನರಸೀಪುರದ ನಾರಾಯಣಮೂರ್ತಿ ಅವರ ಕುಟುಂಬದವರು ಔಷಧ ವಿತರಿಸುತ್ತಿದ್ದಾರೆ. ಗುರುವಾರ ಮತ್ತು ಭಾನವಾರ ಮಾತ್ರ ಇಲ್ಲಿ ಔಷಧ ಕೊಡಲಾಗುತ್ತದೆ. ಕರೋನ ಹಿನ್ನೆಲೆಯಲ್ಲಿ ಹೆಚ್ಚು ಜನರನ್ನು ಸೇರಿಸಬಾರದು ಎಂಬ ಕಾರಣಕ್ಕೆ ಔಷಧ ನೀಡದಿರುವಂತೆ ಆನಂದಪುರ ಗ್ರಾಮ ಪಂಚಾಯಿತಿ ವತಿಯಿಂದ ನೊಟೀಸ್ ನೀಡಲಾಗಿತ್ತು.
ನಾಟಿ ಔಷಧ ವಿತರಣೆಯನ್ನು ನಿಲ್ಲಿಸಿರುವ ವಿಚಾರ ತಿಳಿಯದೆ ದೂರದ ಊರುಗಳಿಂದ ಬಂದವರು, ಔಷಧ ಸಿಗದೆ ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟಿಸಿ, ಔಷಧ ನೀಡಲು ಅವಕಾಶ ನೀಡುವಂತೆ ಆಗ್ರಹಿಸಿದರು. ಇದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರ ಮಧ್ಯವಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು. ಆದರೆ ಯಾರೊಬ್ಬರಿಗೂ ಔಷಧ ವಿತರಣೆ ಮಾಡಲಿಲ್ಲ.


ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು







