ಕಾಳೇನಹಳ್ಳಿ ಶಿವಯೋಗಾಶ್ರಮದ ನೂತನ ಗುರುಗಳ ಪಟ್ಟಾಧಿಕಾರ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 27 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕಾಳೇನಹಳ್ಳಿಯ ಶಿವಯೋಗಾಶ್ರಮದ ಶ್ರೀ ಮ.ನಿ.ಪ್ರ. ಲಿಂಗೈಕ್ಯರಾದ ರೇವಣಸಿದ್ಧ ಮಹಾಸ್ವಾಮಿ ಅವರ ಪ್ರಥಮ ಪುಣ್ಯ ಸ್ಮರಣೆ ಮತ್ತು ನೂತನ ಗುರುಗಳಾದ ಶ್ರೀ.ಮ.ನಿ.ಪ್ರ ಡಾ.ಸಿದ್ಧಲಿಂಗ ಮಹಾಸ್ವಾಮೀಜಿ ಅವರ ಪಟ್ಟಾಧಿಕಾರ ಸಮಾರಂಭ, ಮಠದ ಆವರಣದಲ್ಲಿ ನಡೆಯಿತು.

ತಿಪ್ಪಾಯಿಕೊಪ್ಪ ಶ್ರೀ ಮ.ನಿ.ಪ್ರ.ವಿರೂಪಾಕ್ಷ ಮಹಾಸ್ವಾಮೀಜಿ ಅವರು ಶ್ರೀ ಮ.ನಿ.ಪ್ರ. ಡಾ.ಸಿದ್ದಲಿಂಗ ಮಹಾಸ್ವಾಮೀಜಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ತಿಪ್ಪಾಯಿಕೊಪ್ಪ ಶ್ರೀ ಮ.ನಿ.ಪ್ರ. ವಿರೂಪಾಕ್ಷ ಮಹಾಸ್ವಾಮೀಜಿ ಅವರು, ಲಿಂಗೈಕ್ಯರಾದ ಶ್ರೀ ಮ.ನಿ.ಪ್ರ.ರೇವಣಸಿದ್ಧ ಮಹಾಸ್ವಾಮೀಜಿ ಅವರು ನಲವತ್ತು ವರ್ಷ ಸುದೀರ್ಘ ಸೇವೆ ಸಲ್ಲಿಸಿದ್ದರು. ಪ್ರತಿನಿತ್ಯ ಭಕ್ತರಿಗೆ ದಾಸೋಹ, ಭಕ್ತರ ಕಷ್ಟ, ನಷ್ಟಗಳನ್ನು ಕೇಳಿ, ಸಾಂತ್ವನ ಹೇಳಿ, ಸ್ಥೈರ್ಯ ತುಂಬುತ್ತಿದ್ದರು. ಇದೆ ಕಾರಣಕ್ಕೆ ಅವರನ್ನು ಕಾಯಕ ಯೋಗಿ ಎಂದು ಭಕ್ತರು ಕರೆಯುತ್ತಿದ್ದರು ಎಂದರು.

ಇದನ್ನೂ ಓದಿ | ಶಿಕಾರಿಪುರದ ನಡೆದಾಡುವ ದೇವರು, ಶಿವಯೋಗ ಮಂದಿರದ ಸ್ವಾಮೀಜಿ ಲಿಂಗೈಕ್ಯ, ಸಿಎಂ ಸೇರಿ ಹಲವರ ಸಂತಾಪ

ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀ. ಮ.ನಿ.ಪ್ರ ಡಾ.ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಅವರು ಆಶೀರ್ವಚನ ನೀಡಿ, ಲಿಂಗೈಗ್ಯರಾದ ಶ್ರೀ ರೇವಣಸಿದ್ಧ ಸ್ವಾಮೀಜಿ ಅವರೊಂದಿಗೆ ಸುದೀರ್ಘ ಒಟನಾಟವಿತ್ತು. ತಾಯಿಯೊಬ್ಬಳು ಮಗುವಿಗೆ ನೀಡುವಂತ ಪ್ರೀತಿಗಿಂತಲೂ ಹೆಚ್ಚು ಪ್ರೀತಿ ನೀಡಿದ್ದಾರೆ. ಅವರ ಸಲಹೆ, ಸಹಕಾರದಿಂದ ಮೂರು ಸಾವಿರ ಮಠದ ಪೀಠಾಧಿಪತ್ಯವನ್ನು ಮುನ್ನಡೆಸುತ್ತಿದ್ದೇನೆ ಎಂದರು.

ಆನಂದಪುರದ ಮುರುಘಾಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಳ್ಳಾರಿಯ ಹೊಸಪೇಟೆ ಕೊಟ್ಟೂರೇಶ್ವರ ಸಂಸ್ಥಾನದ ಹಾಲಕೆರೆಯ ಶ್ರೀ ಸಂಗನಬಸವ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು, ಸಂಸದ ಬಿ.ವೈ.ರಾಘವೇಂದ್ರ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.

163284074 1354756211552462 1167004421340657199 o.jpg? nc cat=101&ccb=1 3& nc sid=730e14& nc ohc=IHRpbGqqlg0AX83lH7U& nc ht=scontent.fblr1 4

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment