| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021
ಆರನೆ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿ, ಕೆಎಸ್ಆರ್ಟಿಸಿ ನೌಕರರು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ನಡುವೆ ಇವತ್ತಿಂದಲೇ ಮುಷ್ಕರದ ಬಿಸಿ ತಟ್ಟಲು ಆರಂಭವಾಗಿದೆ.
ಮುಷ್ಕರದ ಮುನ್ನಾ ದಿನವೇ ಶಿವಮೊಗ್ಗದಲ್ಲಿ ಶೇ.50ರಷ್ಟು ಬಸ್ ಸಂಚಾರ ಕಡಿತವಾಗಿದೆ ಶಿವಮೊಗ್ಗ ವಿಭಾಗದ ನಾಲ್ಕು ಘಟಕಗಳಿಂದ 205 ಬಸ್ಸುಗಳ ಪೈಕಿ ಈತನಕ 107 ಬಸ್ಸುಗಳು ಮಾತ್ರ ಹೊರ ಊರುಗಳಿಗೆ ಸಂಚರಿಸಿವೆ ಎಂದು ಹೇಳಲಾಗುತ್ತಿದೆ. ವಿವಿಧೆಡೆಯಿಂದ ಜಿಲ್ಲೆಗೆ ಬರುವ ಬಸ್ಸುಗಳ ಸಂಖ್ಯೆಯಲ್ಲೂ ಕಡಿತವಾಗಿದೆ.
ಪ್ರಯಾಣಿಕರ ಪರದಾಟ ಶುರು
ದೂರದ ಊರುಗಳಿಗೆ ತೆರಳಲು ಬಸ್ ನಿಲ್ದಾಣಕ್ಕೆ ಆಗಮಿಸಿರುವ ಪ್ರಯಾಣಿಕರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಸ್ಸುಗಳಿಗೆ ಕಾಯುವವರ ಸಂಖ್ಯೆ ಹೆಚ್ಚುತ್ತಿದೆ.
ಶಿವಮೊಗ್ಗ ಜಿಲ್ಲೆಯೊಳಗೆ ತಟ್ಟುವುದಿಲ್ಲ ಬಿಸಿ
ಸಾರಿಗೆ ನೌಕರರು ಮುಷ್ಕರ ನಡೆಸಿದರೂ ಜಿಲ್ಲೆಯೊಳಗೆ ಪ್ರಯಾಣಿಕರಿಗೆ ಅದರ ಬಿಸಿ ತಟ್ಟುವುದಿಲ್ಲ. ಜಿಲ್ಲೆಯ ಬಹುತೇಕ ರೂಟ್ಗಳಲ್ಲಿ ಖಾಸಗಿ ಬಸ್ಗಳೇ ಸಂಚರಿಸುತ್ತಿವೆ. ಹಾಗಾಗಿ ಬಹುತೇಕ ಪ್ರಯಾಣಿಕರು ಖಾಸಗಿ ಬಸ್ಗಳ ಮೇಲೆ ಅವಲಂಬಿತವಾಗಿದ್ದಾರೆ. ಶಿವಮೊಗ್ಗ ಭದ್ರಾವತಿ, ಶಿವಮೊಗ್ಗ ಹೊನ್ನಾಳಿ ರೂಟ್ಗಳಲ್ಲಿ ಮಾತ್ರ ಸರ್ಕಾರಿ ಬಸ್ಸುಗಳು ಸಂಚರಿಸುತ್ತಿವೆ. ಈ ಮಾರ್ಗದಲ್ಲಿ ಪರ್ಯಾಯ ವ್ಯವಸ್ಥೆಗೆ ಜಿಲ್ಲಾಡಳಿತ ಯೋಜಿಸಿದೆ.
ಜಿಲ್ಲಾಡಳಿತಕ್ಕೆ ವರದಿ ಸಲ್ಲಿಕೆ
ಪ್ರಯಾಣಿಕರಿಗೆ ಅನಾನುಕೂಲ ಆಗದಂತೆ ತಡೆಯಲು ಖಾಸಗಿ ಬಸ್ಗಳ ಸಂಚಾರಕ್ಕೆ ಜಿಲ್ಲಾಡಳಿತ ಚಿಂತಿಸಿದೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿಯಿಂದ ಜಿಲ್ಲಾಡಳಿತ ವರದಿ ಪಡೆದುಕೊಂಡಿದೆ. ಶಿವಮೊಗ್ಗ ವಿಭಾಗದಿಂದ ಎಷ್ಟು ಬಸ್ಸುಗಳು ಸಂಚಾರ ಮಾಡುತ್ತವೆ, ಯಾವೆಲ್ಲ ಮಾರ್ಗಗಳಲ್ಲಿ ಸರ್ಕಾರಿ ಬಸ್ಸುಗಳು ಸಂಚರಿಸುತ್ತಿವೆ ಅನ್ನುವದರ ಮಾಹಿತಿ ಪಡೆಯಲಾಗಿದೆ. ಬುಧವಾರ ಬೆಳಗ್ಗೆಯಿಂದ ಅನಿವಾರ್ಯತೆ ಉಂಟಾದರೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಯೋಜಿಸಲಾಗಿದೆ.




ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()