ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021
ನರೇಂದ್ರ ಮೋದಿ ವಿಚಾರ ಮಂಚ್ ವತಿಯಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳೊಂದಿಗೆ ಯುಗಾದಿ ಹಬ್ಬ ಆಚರಿಸಲಾಯಿತು. ಕೈದಿಗಳಿಗೆ ಬೇವು, ಬೆಲ್ಲ ವಿತರಿಸಿ, ಶುಭಾಶಯ ತಿಳಿಸಲಾಯಿತು.
ನಲಿ ನಲಿಯುತ ಯುಗಾದಿ ಆಚರಣೆ
ಕೈದಿಗಳು ಯುಗಾದಿ ಹಬ್ಬವನ್ನು ಸಡಗರದಿಂದ ಆಚರಿಸಿದರು. ಯುಗಾದಿ ಸಂಬಂಧ ಹಾಡುಗಳನ್ನು ಹೇಳಿ, ಸಂಭ್ರಮಿಸಿದರು. ಬಳಿಕ ನರೇಂದ್ರ ಮೋದಿ ವಿಚಾರ ಮಂಚ್ನ ವತಿಯಿಂದ ಕೈದಿಗಳಿಗೆ ಬೇವು, ಬೆಲ್ಲ ವಿತರಿಸಲಾಯಿತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಬೇವು, ಬೆಲ್ಲ ಹಂಚಿ ಶುಭಾಶಯ ವಿನಿಮಯ
ಈ ವೇಳೆ ಮಾತನಾಡಿದ ನರೇಂದ್ರ ಮೋದಿ ವಿಚಾರ ಮಂಚ್ನ ರಾಜಾಧ್ಯಕ್ಷ ಬಳ್ಳೆಕರೆ ಸಂತೋಷ್, ಕೈದಿಗಳು ಕುಟುಂಬದಿಂದ ದೂರಾಗಿ, ಇಲ್ಲಿ ಬಂಧಿಯಾಗಿರುತ್ತಾರೆ. ಅವರಲ್ಲಿ ಆತ್ಮವಿಶ್ವಾಸ ತುಂಬಿ, ಆರೋಪ ಮುಕ್ತರಾಗಲಿ ಎಂದು ಹಾರೈಸುತ್ತ ಬೇವು ಬೆಲ್ಲ ಹಂಚಿದ್ದೇವೆ. ಹೊಸ ವರ್ಷ ಅವರ ಬಾಳಲ್ಲಿ ಹೊಸ ಹುರುಪು ನೀಡಲಿ ಎಂದು ಈ ಕಾರ್ಯ ಕೈಗೊಂಡಿದ್ದೇವೆ ಎಂದು ತಿಳಿಸಿದರು.
ನರೇಂದ್ರ ಮೋದಿ ವಿಚಾರ ಮಂಚ್ನ ಜಿಲ್ಲಾಧ್ಯಕ್ಷ ಶರತ್ ಕಲ್ಯಾಣಿ, ಬಜರಂಗದಳ ಮುಖಂಡ ದೀನದಯಾಳು, ಜೈಲರ್ ಶಿವಾನಂದ ಶಿವಪೂರಿ, ಜೈಲರ್ ಅನಿಲ್, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






