ಗೋಪಿ ಸರ್ಕಲ್​ನಲ್ಲಿ ಮೇಣದ ಬತ್ತಿ ಹಿಡಿದು ಸಾರಿಗೆ ನೌಕರರ ಪ್ರತಿಭಟನೆ, ಗೂಢಚರ್ಯೆಗೆ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 APRIL 2021

ಆರನೆ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಕೆಎಸ್​ಆರ್​ಟಿಸಿ ನೌಕರರು ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.

Covid 19 Vaccination Kan poster 1 1

ಶಿವಮೊಗ್ಗದ ಗೋಪಿ ಸರ್ಕಲ್​ನಲ್ಲಿ ಮೇಣದ ಬತ್ತಿ ಹಿಡಿದು ನೌಕರರು ಪ್ರತಿಭಟನೆ ನಡೆಸಿದರು. ತಮ್ಮ ಹಕ್ಕೊತ್ತಾಯಗಳನ್ನು ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿದರು.

ಗೂಢಚರ್ಯೆಗೆ ಆರೋಪ, ಆಕ್ರೋಶ

ಕೆಎಸ್​ಆರ್​ಟಿಸಿಯ ಸಿಬ್ಬಂದಿಯೊಬ್ಬರು ತಮ್ಮ ಪ್ರತಿಭಟನೆಯ ಗೂಢಚರ್ಯೆ ಮಾಡುತ್ತಿದ್ದಾರೆ. ಪ್ರತಿಭಟನಾನಿರತ ನೌಕರರ ಮಾತುಗಳನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿ, ಹಿರಿಯ ಅಧಿಕಾರಿಗಳಿಗೆ ಕಳುಹಿಸುತ್ತಿದ್ದಾರೆ. ಇವರಿಂದಾಗಿ ಹಲವು ನೌಕರರ ವರ್ಗಾವಣೆಯಾಗುತ್ತಿದೆ. ಗೂಢಚರ್ಯೆ ಮಾಡುವ ಅಗತ್ಯವೇನು ಎಂದು ನೌಕರರು ಆಕ್ರೋಶ ವ್ಯಕ್ತಪಡಿಸಿದರು.

ವಕೀಲ ಕೆ.ಪಿ.ಶ್ರೀಪಾಲ್, ದಲಿತ ಸಂಘರ್ಷ ಸಮಿತಿ ಮುಖಂಡ ಗುರುಮೂರ್ತಿ, ಬಂಜಾರ ವಿದ್ಯಾರ್ಥಿ ಸಂಘಟನೆ ಮುಖಂಡ ಗಿರೀಶ್, ಕೆಎಸ್​ಆರ್​ಟಿಸಿ ನೌಕರರ ಸಂಘದ ಸಂತೋಷ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಪ್ರತಿಭಟನೆಯ ವಿಡಿಯೋ ರಿಪೋರ್ಟ್


ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment