ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 APRIL 2021
ಮದುವೆಗೆ ಹೋಗಿದ್ದ ಒಂದೇ ಊರಿನ 21 ಮಂದಿಯಲ್ಲಿ ಕರೋನ ಸೋಂಕು ಪತ್ತೆಯಾಗಿದೆ. ಇದರಿಂದ ಇಡೀ ಊರು ಆತಂಕಗೊಂಡಿದೆ.
ಭದ್ರಾವತಿ ತಾಲೂಕು ಹೊಸಳ್ಳಿ ಗ್ರಾಮದ 21 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇನ್ನಷ್ಟು ಮಂದಿಗೆ ಸೋಂಕು ತಗುಲಿರುವ ಶಂಕೆ ಇದ್ದು, ಇವತ್ತು ಇಡೀ ಊರಿನವರ ಸ್ವ್ಯಾಬ್ ಟೆಸ್ಟ್ ಮಾಡಲಾಗುತ್ತಿದೆ.
ಅಂಗನವಾಡಿ ಕಾರ್ಯಕರ್ತೆಯ ಮಗಳ ಮದುವೆ
ಹೊಳೆಹೊನ್ನೂರು ಸಮೀಪದ ನಾಗತಿ ಬೆಳಗಲು ನಂಜುಂಡೇಶ್ವರ ದೇವಸ್ಥಾನದಲ್ಲಿ ಹೊಸಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯ ಮಗಳ ಮದುವೆ ಇತ್ತು. ಹೊಸಳ್ಳಿಯ ಹಲವರು ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಬಳಿಕ ಕೆಲವರಲ್ಲಿ ಕೆಮ್ಮು, ಶೀತ, ಜ್ವರ ಕಾಣಿಸಿಕೊಂಡಿತ್ತು. ಚಿಕಿತ್ಸೆಗೆ ಒಳಗಾದಾಗ ಕರೋನ ಸೋಂಕು ದೃಢವಾಗಿತ್ತು.
72 ಮಂದಿಗೆ ಪರೀಕ್ಷೆ
ಹೊಸಳ್ಳಿ ಗ್ರಾಮದ 72 ಮಂದಿ ಪರೀಕ್ಷೆಗೆ ಒಳಗಾಗಿದ್ದು, ಈ ಪೈಕಿ 21 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು ಆರೋಗ್ಯ ಇಲಾಖೆಯನ್ನು ಚಿಂತೆಗೀಡು ಮಾಡಿದೆ. ಸೋಂಕಿತರಿಗೆ ಕೂಡಲೆ ಚಿಕಿತ್ಸೆಗೊಳಪಡಿಸಲಾಯಿತು. ಈ ನಡುವೆ ವರನ ಗ್ರಾಮವಾದ ಕುಂಚೇನಹಳ್ಳಿಯಲ್ಲೂ ಈಗ ಆತಂಕ ಸೃಷ್ಟಿಯಾಗಿದೆ.
ಹೊಸಳ್ಳಿಗೆ ಇವತ್ತು ಎರಡು ಟೀಮ್
ಹೊಸಳ್ಳಿ ಗ್ರಾಮದ ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಹಾಗಾಗಿ ಇವತ್ತು ಊರಿಗೆ ಎರಡು ತಂಡ ಕಳುಹಿಸಲಾಗುತ್ತಿದೆ. ಗ್ರಾಮಸ್ಥರ ಸ್ವ್ಯಾಬ್ ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200