ನವದದೆಹಲಿ : ಕರೋನ ಹಿನ್ನೆಲೆ ಹಲವು ರಾಜ್ಯಗಳಲ್ಲಿ ಲಾಕ್ಡೌನ್ ಘೋಷಣೆಯಾಗಿದೆ. ಆದರೂ ರೈಲುಗಳ ಸಂಚಾರ ಎಂದಿನಂತೆ ಇರಲಿದೆ. ಅಗತ್ಯವಿದ್ದ ಕಡೆ ಹೆಚ್ಚುವರಿ ರೈಲುಗಳನ್ನು ಓಡಲಾಗತ್ತದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.
ಮಹಾರಾಷ್ಟ್ರ, ದೆಹಲಿ, ಗುಜರಾತ್, ಕರ್ನಾಟಕದಿಂದ ವಿವಿಧೆಡೆಗೆ ಹೆಚ್ಚು ರೈಲುಗಳು ಸಂಚರಿಸುತ್ತಿವೆ. ಇಲ್ಲಿನ ಪರಿಸ್ಥಿತಿಯ ಅವಲೋಕ ಮಾಡಲಾಗುತ್ತಿದೆ. ಟಿಕೆಟಿಂಗ್ ಪ್ರಮಾಣವನ್ನು ಗಮನಿಸಲಾಗುತ್ತಿದೆ. ಹೆಚ್ಚಿನ ಪ್ರಯಾಣಿಕರು ಸಂಚರಿಸುವ ಮಾರ್ಗದಲ್ಲಿ ಹೆಚ್ಚುವರಿ ರೈಲು ಓಡಿಸಲು ಚಿಂತಿಸಲಾಗಿದೆ ಎಂದು ರೈಲ್ವೆ ಮಂಡಳಿ ಅಧ್ಯಕ್ಷ ಸುನೀತ್ ಶರ್ಮಾ ಹೇಳಿದ್ದಾರೆ.
![]() |
ಇದನ್ನೂ ಓದಿ – ಎಲ್ಲರಿಗೂ ಆಕ್ಸಿಜನ್, ವೆಂಟಿಲೇಟರ್ ಬೇಕಾಗಲ್ಲ, ಕರೋನ ಬಗ್ಗೆ ಆತಂಕವೂ ಬೇಡ, ತಜ್ಞ ವೈದ್ಯರು ಸಲಹೆ ಏನು?
ದೇಶದಲ್ಲಿ ಶೇ.70ರಷ್ಟು ರೈಲುಗಳು ಕೋವಿಡ್ ಪೂರ್ವದಿಂದಲೂ ಸಂಚರಿಸುತ್ತಿವೆ. 330 ಬೇಸಿಗೆ ರೈಲುಗಳು ಕೂಡ ಓಡಾಡುತ್ತಿವೆ. ಕೋವಿಡ್ ಹಿನ್ನೆಲೆ ಯಾವುದೆ ರಾಜ್ಯವು ರೈಲುಗಳ ಸ್ಥಗಿತಕ್ಕೆ ಮನವಿ ಮಾಡದ ಹಿನ್ನೆಲೆ ಸಂಚಾರ ನಿರಂತರವಾಗಿದೆ ಎಂದು ಸುನೀತ್ ಶರ್ಮಾ ಹೇಳಿದ್ದಾರೆ.
ಇದನ್ನೂ ಓದಿ – ಎಲ್ಲರಿಗೂ ಆಕ್ಸಿಜನ್, ವೆಂಟಿಲೇಟರ್ ಬೇಕಾಗಲ್ಲ, ಕರೋನ ಬಗ್ಗೆ ಆತಂಕವೂ ಬೇಡ, ತಜ್ಞ ವೈದ್ಯರು ಸಲಹೆ ಏನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200