‘ಇದು ಮುಸ್ಲಿಂ ಗೂಂಡಾಗಳ ಕೃತ್ಯ, ಅಶಾಂತಿ ಉಂಟು ಮಾಡುವುದೆ ಇವರ ಧ್ಯೇಯ’, ಗಂಭೀರ ಆರೋಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MAY 2021

ಹಳೆ ಶಿವಮೊಗ್ಗ ಭಾಗದಲ್ಲಿ ಕಾರು, ಬೈಕು, ಆಟೋಗಳನ್ನು ಜಖಂ ಮಾಡಿದ ವಿಚಾರ ತಿಳಿಯುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾರುಗಳ ಗಾಜು ಪುಡಿ ಪುಡಿಯಾಗಿರುವುದು, ಬೈಕುಗಳನ್ನು ಒಡೆದು ಹಾಕಿರುವುದನ್ನು ಗಮನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು. ಪೊಲೀಸರಿಂದ ವಿವರಣೆ ಕೇಳಿದರು.

‘ಮುಸ್ಲಿಂ ಗೂಂಡಾಗಳದ್ದೇ ಕೈವಾಡ’

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ  ಈ ಕೃತ್ಯದ ಹಿಂದೆ ಮುಸ್ಲಿಂ ಗೂಂಡಾಗಳ ಕೈವಾಡವಿದೆ ಎಂದು ಆರೋಪಿಸಿದರು.

ಇನ್ನು, ಸಂಸದ ಬಿ.ವೈ.ರಾಘವೇಂದ್ರ ಪ್ರತಿಕ್ರಿಯೆ ನೀಡಿ, ಈ ಕೃತ್ಯದ ಹಿಂದೆ ಗಾಂಜಾ ಮತ್ತು ಮಾತ್ರವಲ್ಲ, ಬೇರೆನೋ ಪ್ರಮುಖ ಕಾರಣವಿದ್ದಂತಿದೆ. ಇದರ ಬಗ್ಗೆ ಆಳವಾದ ತನಿಖೆ ಅವಶ್ಯಕತೆ ಇದೆ ಎಂದು ತಿಳಿಸಿದರು. ಸಚಿವರು, ಸಂಸದರ ಭೇಟಿ, ಹೇಳಿಕೆಯ ವಿಡಿಯೋ ಇಲ್ಲಿದೆ.

17 ಕಾರುಗಳು, 20ಕ್ಕೂ ಹೆಚ್ಚು ಬೈಕುಗಳು, ಒಂದು ಆಟೋಗೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ಗಾಜು ಪುಡು ಪುಡಿ ಮಾಡುತ್ತಿದ್ದಂತೆ ಸ್ಥಳೀಯರು ಎಚ್ಚರವಾಗಿದ್ದು, ಇಬ್ಬರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ | ಶಿವಮೊಗ್ಗ ಗಾಂಧಿ ಬಜಾರ್ ಸುತ್ತಮುತ್ತ ಮನೆ ಮುಂದೆ ನಿಲ್ಲಿಸಿದ್ದ ಸಾಲು ಸಾಲು ಕಾರುಗಳ ಗ್ಲಾಸ್ ಪೀಸ್ ಪೀಸ್

ಹಳೆ ಶಿವಮೊಗ್ಗ ಭಾಗದಲ್ಲಿ ಇಂತಹ ಪ್ರಕರಣಗಳು ಇದೇ ಮೊದಲೇನಲ್ಲ.  ಈ ಹಿಂದೆ ಹಲವು ಭಾರಿ ಕಾರುಗಳ ಗಾಜು ಪುಡಿ ಮಾಡಿರುವುದು, ಆಟೋಗೆ ಬೆಂಕಿ ಹಚ್ಚಿದ್ದ ಘಟನೆಗಳು ನಡೆದಿವೆ. ಈ ಭಾರಿ ದೊಡ್ಡ ಸಂಖ್ಯೆಯ ವಾಹನಗಳಿಗೆ ಹಾನಿ ಮಾಡಲಾಗಿದೆ. ಇದರಿಂದ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 20, 2021

Leave a Comment