ಸಾಗರದಲ್ಲೂ ಕರೋನ ಅಬ್ಬರ, ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಪಾಸಿಟಿವ್ ಪ್ರಕರಣ? ಇಲ್ಲಿದೆ ಡಿಟೇಲ್ಸ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಸುದ್ದಿಯ ಮುಂದಿನ 9 ಪ್ಯಾರಾಗಳು ಕೆಳಗಿವೆ.

ಸಾಗರ ತಾಲೂಕಿನ ಗ್ರಾಮೀಣ ಪ್ರದೇಶದಲ್ಲೂ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಗ್ರಾಮೀಣ ಭಾಗದಲ್ಲಿ 660ಕ್ಕಿಂತಲೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ.

ಕರೋನ ಹರಡುವುದನ್ನು ತಡೆಯಲು ತಾಲೂಕಿನ ವಿವಿಧೆಡೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

ಯಾವ್ಯಾವ ಹಳ್ಳಿಯಲ್ಲಿ ಎಷ್ಟಿದೆ ಕೇಸ್?

ಸಾಗರ ತಾಲೂಕಿನ ಕಾನ್ಲೆ  ವ್ಯಾಪ್ತಿಯಲ್ಲಿ 70ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಇನ್ನು  ಹೆಗ್ಗೋಡು ವ್ಯಾಪ್ತಿಯಲ್ಲಿ 40ಕ್ಕೂ ಹೆಚ್ಚು ಪ್ರಕರಣವಿದೆ.

ತಾಳಗುಪ್ಪ, ಉಳ್ಳೂರು ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಆನಂದಪುರ, ಅರಳಗೋಡು, ಬರೂರು, ಭಾನುಕುಳಿ, ಭೀಮನೇರಿ, ಗೌತಮಪುರ, ಹಿರೇಬಿಳಗುಂಜಿ, ಹಿರೇನಲ್ಲೂರು, ಖಂಡಿಕ, ನಾಡಕಲಸಿ, ಪಡವಗೋಡು, ಸೈದೂರು ವ್ಯಾಪ್ತಿಯಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳಿವೆ.

ಆವಿನಹಳ್ಳಿ, ಭೀಮನಕೋಣೆ, ಕಲ್ಮನೆ, ಕೆಳದಿ, ಮರತೂರು, ಮಾಸೂರು, ಸಿರಿವಂತೆ, ತಲವಟ, ತ್ಯಾಗರ್ತಿ, ಯಡಜಿಗಳೆಮನೆ, ಯಡೇಹಳ್ಳಿ ವ್ಯಾಪ್ತಿಯಲ್ಲಿ ಹತ್ತಕ್ಕೂ ಹೆಚ್ಚು ಪ್ರಕರಣಗಳಿವೆ.

ಆಚಪುರ, ಹೊಸೂರು, ಕೋಳೂರು, ಕುದರೂರು, ಮಳವೆ, ತುಮರಿ ವ್ಯಾಪ್ತಿಯಲ್ಲಿ ಹತ್ತಕ್ಕಿಂತಲೂ ಕಡಿಮೆ ಪ್ರಕರಣಗಳಿವೆ.

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment