ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021
ಹಳೆ ಶಿವಮೊಗ್ಗ ಭಾಗ ಮತ್ತೆ ಜಲಾವೃತವಾಗಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿಯಿಂದ ನೀರು ಬಡಾವಣೆಗಳಿಗೆ ನುಗ್ಗಿದೆ. ರಸ್ತೆಗಳು ಜಲಾವೃತವಾಗಿವೆ. ಮನೆಗಳಿಗೆ ನೀರು ನುಗ್ಗಿದೆ.
ಎಲ್ಲೆಲ್ಲಿ ನೀರು ನುಗ್ಗಿದೆ?
ತುಂಗಾ ನದಿ ತೀರದಲ್ಲಿರುವ ಕುಂಬಾರ ಬೀದಿ, ಸೀಗೆಹಟ್ಟಿ, ಕೆ.ಆರ್.ಪುರಂ ರಸ್ತೆಯ ಸ್ವಲ್ಪ ಭಾಗ, ವಿದ್ಯಾನಗರ, ಜಗದಂಬ ಬೀದಿ, ಕಂಟ್ರಿ ಕ್ಲಬ್, ರಾಜೀವ್ ಗಾಂಧಿ ಬಡಾವಣೆ, ಆರ್.ಟಿ.ಲೇಔಟ್, ಚಿಕ್ಕಲ್ನ ಶಾಂತಮ್ಮ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶಕ್ಕೆ ನೀರು ನುಗ್ಗಿದೆ.
ನಿವಾಸಿಗಳಲ್ಲಿ ಢವಢವ
ನೀರು ನುಗ್ಗುವ ಆತಂಕದಲ್ಲೇ ಜನರು ದಿನ ದೂಡುವಂತಾಗಿದೆ. ಕೆಲವು ಕಡೆ ರಸ್ತೆ ಮೇಲೆ ನೀರು ನಿಂತಿದೆ. ಇನ್ನೂ ಕೆಲವು ಕಡೆ ಮನೆಗಳಿಗೆ ನೀರು ನುಗ್ಗಿದೆ. ಮನೆಯಲ್ಲಿರುವ ವಸ್ತುಗಳನ್ನ ಕಾಪಾಡಿಕೊಳ್ಳುವುದೆ ಜನರಿಗೆ ಸಾಹಸಮಯವಾಗಿದೆ. ನೀರು ಬರುತ್ತಿದ್ದಂತೆ ಕೆಲವರು ಬೆಲೆಬಾಳುವ ವಸ್ತುಗಳು, ಎಲೆಕ್ಟ್ರಾನಿಕ್ ವಸ್ತುಗಳನ್ನು ಜನರು ಬೇರೆ ಶಿಫ್ಟ್ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ | ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ ಮೂರೂವರೆ ಅಡಿ ಹೆಚ್ಚಳ, ತುಂಗಾ ಜಲಾಶಯದ ಹೊರಹರಿವು ಎಷ್ಟಿದೆ ಗೊತ್ತಾ?

ನೀರು ನುಗ್ಗಲು ಕಾರಣವೇನು?
ತುಂಗಾ ಜಲಾಶಯದಿಂದ 80 ಸಾವಿರ ಕ್ಯೂಸೆಕ್ಗಿಂತಲೂ ಅಧಿಕ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ.
ತಡೆಗೋಡೆ ನಿರ್ಮಿಸಲಾಗಿದ್ದರೂ ರಾಜಾಕಾಲುವೆ, ಚರಂಡಿಗಳ ಮೂಲಕ ನೀರು ನೇರವಾಗಿ ಹಳೆ ಶಿವಮೊಗ್ಗ ಭಾಗದೊಳಗೆ ನುಗ್ಗುತ್ತಿದೆ.
ಕುಂಬಾರ ಬೀದಿ, ಬಿ.ಬಿ.ಸ್ಟ್ರೀಟ್, ಸೀಗೆಹಟ್ಟಿ ಸೇರಿದಂತೆ ಈ ಭಾಗದಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸದೆ ಬಿಟ್ಟಿದ್ದರಿಂದ ಹೂಳು ತುಂಬಿಕೊಂಡಿದೆ ಎಂಬ ಆರೋಪವಿದೆ.
ಇದೆ ಕಾರಣಕ್ಕೆ 2019ರಲ್ಲಿ ಈ ಭಾಗಕ್ಕೆ ನೀರು ನುಗ್ಗಿತ್ತು. ಆ ಸಂದರ್ಭ ಆಸ್ತಿಪಾಸ್ತಿ ಹಾನಿಯಿಂದಾಗಿ ಜನರು ಸಂಕಷ್ಟಕ್ಕೀಡಾಗಿದ್ದರು. ಇದರಿಂದ ಸುಧಾರಿಸಿಕೊಳ್ಳುವ ಹೊತ್ತಿಗೆ ಮತ್ತೊಮ್ಮೆ ಈ ಭಾಗ ಜಲಾವೃತವಾಗುವ ಆತಂಕ ಎದುರಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















