ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 24 DECEMBER 2023
SHIMOGA : ರಾಜ್ಯ ಸರ್ಕಾರದ 5ನೇ ಮಹತ್ವದ ಗ್ಯಾರಂಟಿ ಯೋಜನೆ ಜಾರಿಗೆ ದಿನಾಂಕ ನಿಗದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗದಲ್ಲಿ ಈ ಯೋಜನೆ ಜಾರಿಗೊಳಿಸಲಿದ್ದಾರೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸರ್ಕಾರದ 5ನೇ ಗ್ಯಾರಂಟಿ ಯೋಜನೆ ಯುವನಿಧಿ. ಡಿ.26ರಿಂದ ಈ ಯೋಜನೆಗೆ ನೋಂದಣಿ ಕಾರ್ಯ ಆರಂಭವಾಗಲಿದೆ. ಜ.12ರಂದು ಸ್ವಾಮಿ ವಿವೇಕಾನಂದರ ಜಯಂತಿ. ಅಂದು ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಯುವನಿಧಿ ಸಮಾವೇಶ ನಡೆಯಲಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಂದಿನಿಂದ ಯುವನಿಧಿ ಯೋಜನೆಯ ಮೊತ್ತ ಯುವಕರ ಖಾತೆಗೆ ಬಿಡುಗಡೆಯಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಇದನ್ನೂ ಓದಿ – ಶಾಲಾ ಮಕ್ಕಳಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಮಹತ್ವದ ಘೋಷಣೆ ಮಾಡಿದ ಶಿಕ್ಷಣ ಸಚಿವ
ಶಿವಮೊಗ್ಗ ಲೈವ್.ಕಾಂ