ಮ್ಯಾಕ್ಸ್ ಆಸ್ಪತ್ರೆ ಮುಂದೆ 500 ರೂ. ಹಣದ ಕಂತೆ ಬೀಳಿಸಿಕೊಂಡಿದ್ದ ವ್ಯಕ್ತಿ ಪತ್ತೆ, ಯಾರದು? ಪೊಲೀಸರು ಖಚಿತಪಡಿಸಿಕೊಂಡಿದ್ದು ಹೇಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

87150925 809206726225906 5843094214962839552 o.jpg? nc cat=109& nc ohc=xdLVG 2v6qkAX A6L2W& nc ht=scontent.fblr1 3

ಶಿವಮೊಗ್ಗ ಲೈವ್.ಕಾಂ | SHIMOGA | 20 ಫೆಬ್ರವರಿ 2020

ಮ್ಯಾಕ್ಸ್ ಆಸ್ಪತ್ರೆ ಬಳಿ ದೊರೆತೆ ಹತ್ತು ಸಾವಿರ ರೂಪಾಯಿ ಹಣವನ್ನು ವಾರಸುದಾರರಿಗೆ ಒಪ್ಪಿಸುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ. ಹೃದಯ ಸಂಬಂಧಿ ಚಿಕಿತ್ಸೆಗೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಹಣ ಕಳೆದುಕೊಂಡಿದ್ದರು.

https://www.facebook.com/liveshivamogga/videos/2548628092087397/?t=1

ಹಣ ಯಾರಿಗೆ ಸೇರಿದ್ದು?

ಹತ್ತು ಸಾವಿರ ರುಪಾಯಿ ಹಣವು ತೀರ್ಥಹಳ್ಳಿ ತಾಲೂಕು ಬಾಳೆಹಿತ್ಲು ಗ್ರಾಮದ ಉದಯ್ ಕುಮಾರ್ ಎಂಬುವವರಿಗೆ ಸೇರಿದೆ. ಇದನ್ನು ಖಚಿತಪಡಿಸಿಕೊಂಡ ಪೊಲೀಸರು, ಉದಯ್ ಕುಮಾರ್ ಅವರಿಗೆ ಇವತ್ತು ಹಣ ಹಿಂತಿರುಗಿಸಿದ್ದಾರೆ.

190220 Teacher Gives Money to Police 1 1
ರಸ್ತೆಯಲ್ಲಿ ಸಿಕ್ಕ ಹಣವನ್ನು ಪೊಲೀಸರಿಗೆ ಒಪ್ಪಿಸಿದ್ದ ಶಿಕ್ಷಕ ಶರಣಪ್ಪ

ಹಣ ಕಳೆದುಕೊಂಡಿದ್ದು ಹೇಗೆ?

ಉದಯ್ ಕುಮಾರ್ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇದೆ. ಚಿಕಿತ್ಸೆ ಸಲುವಾಗಿ ಆಗಾಗ ಮ್ಯಾಕ್ಸ್ ಆಸ್ಪತ್ರೆಗೆ ಬರುತ್ತಿದ್ದರು. ಬುಧವಾರ ಚಿಕಿತ್ಸೆಗೆ ಬಂದಿದ್ದ ಉದಯ್ ಕುಮಾರ್ ಅವರು ರಕ್ತ ಪರೀಕ್ಷೆ ಮಾಡಿಸಿಕೊಂಡಿದ್ದರು. ನಂತರ ಹೃದಯ ಸಂಬಂಧಿ ಸ್ಕ್ಯಾನಿಂಗ್ ಮಾಡಿಸಬೇಕಿತ್ತು. ಇದಕ್ಕೆ ಸಮಯವಿದ್ದಿದ್ದರಿಂದ ಪಕ್ಕದ ಹೊಟೇಲ್’ನಲ್ಲಿ ಕಾಫಿ ಕುಡಿಯಲು ತೆರಳಿದ್ದರು. ಈ ವೇಳೆ ಜೇಬಿನಲ್ಲಿದ್ದ ಹಣ ಬೀಳಿಸಿಕೊಂಡಿದ್ದರು.

ಉದಯ್ ಅವರ ಹಣ ಅಂತಾ ಖಚಿತವಾಗಿದ್ದು ಹೇಗೆ?

ಮ್ಯಾಕ್ಸ್ ಆಸ್ಪತ್ರೆ ಮುಂಭಾಗ ರಸ್ತೆಯಲ್ಲಿ ಬಿದ್ದಿದ್ದ ಹಣ ಶಿಕ್ಷಕರೊಬ್ಬರಿಗೆ ಸಿಕ್ಕಿತ್ತು. ಶಿಕ್ಷಕ ಶರಣಪ್ಪ ಅವರು ಹಣವನ್ನು ಜಯನಗರ ಪೊಲೀಸ್ ಠಾಣೆ ಸಿಬ್ಬಂದಿ ಚಂದನ್ ನಾಯ್ಕ್ ಅವರಿಗೆ ಒಪ್ಪಿಸಿದ್ದರು. ಈ ಸಂಬಂಧ ಶಿವಮೊಗ್ಗ ಲೈವ್.ಕಾಂ ವರದಿ ಮಾಡಿತ್ತು. ಅದರ ಲಿಂಕ್ ಇಲ್ಲಿದೆ.

ಹಣ ಯಾರಿಗೆ ಸೇರಿದ್ದು ಎಂಬುದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದರು. ಈ ನಡುವೆ ಹಣ ಕಳೆದುಕೊಂಡಿದ್ದ ಉದಯ್ ಕುಮಾರ್ ಅವರು ಮ್ಯಾಕ್ಸ್ ಆಸ್ಪತ್ರೆ ಸಿಬ್ಬಂದಿ ಬಳಿ ತಮ್ಮ ಅಳಲು ತೋಡಿಕೊಂಡಿದ್ದರು. ಅಲ್ಲದೆ ಹಣ ಸಿಕ್ಕರೆ ಹಿಂತಿರುಗಿಸಿ ಎಂದು ಮೊಬೈಲ್ ನಂಬರ್ ನೀಡಿದ್ದರು. ಇದಿಷ್ಟೆ ಅಲ್ಲದೆ, ಸಮೀಪದ ಮೆಡಿಕಲ್ ಶಾಪ್’ನಲ್ಲೂ ಹಣ ಕಳೆದುಕೊಂಡಿರವ ಕುರಿತು ತಿಳಿಸಿ ಹೋಗಿದ್ದರು. ಹಣ ಪತ್ತೆಯಾಗಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಮ್ಯಾಕ್ಸ್ ಆಸ್ಪತ್ರೆ ಸಿಬ್ಬಂದಿ, ಉದಯ್ ಕುಮಾರ್ ಅವರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದರು.

Jayanagara Police Station 1 1

ಠಾಣೆಗೆ ಬಂದರು ಹಣದ ವಾರಸುದಾರ

ಹತ್ತು ಸಾವಿರ ರುಪಾಯಿ ಹಣ ಪೊಲೀಸರ ಬಳಿ ಸೇಫಾಗಿರುವ ವಿಚಾರ ತಿಳಿಯುತ್ತಿದ್ದಂತೆ, ಉದಯ್ ಕುಮಾರ್ ಅವರು ಜಯನಗರ ಪೊಲೀಸ್ ಠಾಣೆಗೆ ಬಂದರು. ಈ ವೇಳೆ ಹಣ ಕಳೆದುಕೊಂಡಿದ್ದು ಹೇಗೆ ಎಂಬುದನ್ನು ಪ್ರಶ್ನಿಸಿದ ಪೊಲೀಸರು, ಮ್ಯಾಕ್ಸ್ ಆಸ್ಪತ್ರೆ, ಮೆಡಿಕಲ್ ಶಾಪ್ ಮಾಲೀಕರನ್ನು ವಿಚಾರಸಿದರು. ಕೂಲಂಕಷ ಪರಿಶೀಲನೆ ಬಳಿಕ ಉದಯ್ ಕುಮಾರ್ ಅವರಿಗೆ ಹಣ ಹಿಂತಿರುಗಿಸಿದರು.

ಜಯನಗರ ಠಾಣೆಯ ಪೊಲೀಸರ ಕಾರ್ಯ ಜನ ಮೆಚ್ಚುಗೆ ಗಳಿಸಿದೆ. ಶಿಕ್ಷಕ ಶರಣಪ್ಪ ಅವರ ಪ್ರಾಮಾಣಿಕತೆ, ಪೊಲೀಸರು ಕರ್ತವ್ಯ ಪ್ರಜ್ಞೆಯಿಂದಾಗಿ ಉದಯ್ ಕುಮಾರ್ ಅವರು ಕಳೆದುಕೊಂಡಿದ್ದ ಹಣ, ಅವರಿಗೆ ಹಿಂತಿರುಗಿದಂತಾಗಿದೆ.  

86383322 807422986404280 829757410657697792 o.jpg? nc cat=105& nc ohc=sTuCziJ1DTkAX8BjYSL& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 20, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment