ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 22 ಫೆಬ್ರವರಿ 2020
ಯುವ ಕಾಂಗ್ರೆಸ್ ವತಿಯಿಂದ ನಿರುದ್ಯೋಗ ಕುರಿತು ರಾಷ್ಟ್ರಮಟ್ಟದ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಯುವ ಕಾಂಗ್ರೆಸ್ ನಗರಾಧ್ಯಕ್ಷ ಗಿರೀಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 23ರಂದು ಕ್ರಾಂತಿಕಾರಿ ಭಗತ್ ಸಿಂಗ್ ಅವರು ಹುತಾತ್ಮರಾದ ದಿನ, ದೆಹಲಿಯಲ್ಲಿರುವ ಯುವ ಕಾಂಗ್ರೆಸ್ ಕಚೇರಿಯಲ್ಲಿ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ ಎಂದರು. ಫೆಬ್ರವರಿ 29ರವರೆಗೆ ರಿಜಿಸ್ಟರ್ ಮಾಡಿಕೊಳ್ಳಲು ಅವರು ಅವಕಾಶವಿದೆ. ಫೇಸ್’ಬುಕ್, ಟ್ವಿಟರ್ ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದಾಗಿದೆ.
ಮಿಸ್ಡ್ ಕಾಲ್ ಕೊಡಿ ಅಭಿಯಾನ
ನಿರುದ್ಯೋಗ ಸಮಸ್ಯೆ ಹೆಚ್ಚಳಕ್ಕೆ ಕಾರಣರಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಏರಿಸಿಲು ಮಿಸ್ಡ್ ಕಾಲ್ ಅಭಿಯಾನ ಆರಂಭಿಸಲಾಗಿದೆ ಎಂದರು. 8151994411 ನಂಬರ್’ಗೆ ಮಿಸ್ಡ್ ಕಾಲ್ ಕೊಟ್ಟು, ನಿರುದ್ಯೋಗ ಸಮಸ್ಯೆ ವಿರುದ್ಧ ಧ್ವನಿಗೂಡಿಸಬೇಕು ಎಂದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್, ಪ್ರಮುಖರಾದ ಕಿರಣ್ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





