ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 24 ಫೆಬ್ರವರಿ 2020
ಜಿಲ್ಲೆಯಲ್ಲಿ ಕಳೆದ 30 ದಿನಗಳಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿಬರೋಬ್ಬರಿ 29 ಮೃತಪಟ್ಟಿದ್ದಾರೆ. ಇದರಲ್ಲಿ ಹೆಚ್ಚಿನ ಪ್ರಕರಣಗಳು ಹೆಲ್ಮಟ್ ಧರಿಸದ ಪ್ರಕರಣಗಳಾಗಿವೆ. ಇಂತಹ ಆಘಾತಕಾರಿ ಮಾಹಿತಿಯನ್ನು ಎಸ್ಪಿ ಕೆ.ಎಂ.ಶಾಂತರಾಜು ಬಹಿರಂಗ ಪಡಿಸಿದ್ದಾರೆ.

ನಗರದ ಡಿಎಆರ್ ಸಭಾಂಗಣದಲ್ಲಿ ಎಸ್ಸಿ ಮತ್ತು ಎಸ್ಟಿ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಹೆಲ್ಮಟ್ ಧರಿಸದ ಸಾರ್ವಜನಿಕರ ರಕ್ಷಣೆಗೆ ಹೆಲ್ಮೆಟ್ ಪಕರಣ ಕಡ್ಡಾಯಗೊಳಿಸಲಾಗಿದೆ. ಕಳೆದೊಂದು ತಿಂಗಳಲ್ಲಿ ರಸ್ತೆ ಅಪಘಾತದಲ್ಲಿ 29 ಜನರು ಮೃತಪಟ್ಟಿದ್ದಾರೆ. ಅದರಲ್ಲಿ ಶೇ.60ಕ್ಕಿಂತ ಹೆಚ್ಚಿನ ಪ್ರಕರಣಗಳು ಹೆಲ್ಮೆಟ್ ಧರಿಸದ ಪ್ರಕರಣಗಳಾಗಿವೆ ಎಂದರು.
ಸರ್ಕಾರಕ್ಕೆ ಶ್ರೀಮಂತಿಕೆ ಬರುವುದಿಲ್ಲ
ಹೆಲೈಟ್ ಧರಿಸದ ಸವಾರರಿಗೆ 500 ರೂ. ದಂಡ ಹಾಕುವುದರಿಂದ ಸರ್ಕಾರಕ್ಕೆ ಶ್ರೀಮಂತಿಕೆ ಬರಲ್ಲ, ಅದೇ ಇನ್ನೂ 500 ರೂ. ಸೇರಿಸಿ ಒಳ್ಳೆಯ ಹೆಲೈಟ್ ತೆಗೆದುಕೊಂಡರೆ ಜೀವ ಉಳಿಯುತ್ತದೆ. ದುಡಿಯುವವರ ಜೀವ ಹೋದರೆ ಇಡೀ ಕುಟುಂಬ ಕಣ್ಣೀರಿನಲ್ಲಿ ಕೈತೊಳೆಯಬೇಕಾಗುತ್ತದೆ. ಈ ಬಗ್ಗೆ ಎಚ್ಚರವಹಿಸಿ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದರು.
ಟ್ರಾಫಿಕ್ ಪೊಲೀಸರು ಹೆಲ್ಮೆಟ್ ಇಲ್ಲದವರನ್ನು ಹಿಡಿಯುವಾಗ ಜಾತಿ ಗುರುತಿಸುತ್ತಾರೆ ಎಂದು ಡಿಎಸ್ಎಸ್ ಕಾರ್ಯಕರ್ತ ಮಂಜುನಾಥ ದೂರಿನ ಕುರಿತು ಪ್ರತಿಕ್ರಿಯಿಸಿದ ಅವರು, ಪೊಲೀಸರು ಹಿಲ್ಮೆಟ್ ಇಲ್ಲದವರಿಗೆ ದಂಡ ಹಾಕುತ್ತಾರೆ. ಖಾಕಿ ಧರಿಸಿದ ಮೇಲೆ ಎಲ್ಲ ಸಾರ್ವಜನಿಕರು ಒಂದೇ. ಅಲ್ಲಿ ಜಾತಿ ಗುರುತಿಸುತ್ತಾರೆ ಎಂಬುದರಲ್ಲಿ ಹುರುಳಿಲ್ಲ ಎಂದರು.
ಡಿವೈಎಸ್ಪಿ ಉಮೇಶ್ ನಾಯ್, ಸಿಪಿಐ ವಸಂತಕುಮಾರ್ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





