ಶಿವಮೊಗ್ಗ ಲೈವ್.ಕಾಂ | SHIMOGA | 29 ಫೆಬ್ರವರಿ 2020
ನಗರದ ಹೆಲಿಪ್ಯಾಡ್ನಲ್ಲಿ ಪೂರ್ವ ಪರವಾನಗಿ ಇಲ್ಲದೇ ಖಾಸಗಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಿದ ಕಂಪನಿಗೆ ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ.
ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರನ್ನು ಕರೆತಂದ ಹೆಲಿಕಾಪ್ಟರ್ ಜಿಲ್ಲಾಡಳಿತದಿಂದ ಪೂರ್ವ ಪರವಾನಗಿ ಪಡೆಯಬೇಕು. ಆದರೆ, ಯಾವುದೇ ಮಾಹಿತಿ ನೀಡದೇ ಏಕಾಏಕಿ ಹೆಲಿಪ್ಯಾಡ್ನಲ್ಲಿ ಗುರುವಾರ ನಿಲ್ಲಿಸಲಾಗಿದೆ. ಮಾರಿಕಾಂಬ ಜಾತ್ರೆ ಪ್ರಯುಕ್ತ ಹೆಲಿಟೂರಿಸ್ಂಗೆ ಮಾತ್ರ ಪರವಾನಗಿ ನೀಡಲಾಗಿದೆ. ಅದನ್ನು ಬಿಟ್ಟು ಬೇರೆಯ ಹೆಲಿಕಾಪ್ಟರ್ಗಳನ್ನು ಲ್ಯಾಂಡ್ ಮಾಡುವುದಕ್ಕೆ ಅವಕಾಶವಿಲ್ಲ.
ನಿಯಮ ಮೀರಿ ಬೇರೆಯ ಹೆಲಿಕಾಪ್ಟರ್ ತಂದು ನಿಲ್ಲಿಸಲಾಗಿದೆ. ತಕ್ಷಣ ಈ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ಸಿಕ್ಕಿದ್ದೇ ಹೆಲಿಪ್ಯಾಡ್ನಲ್ಲೇ ವಿಚಾರಣೆಗೆ ಒಳಪಡಿಸಲಾಗಿದೆ. ನಂತರ, ನೋಟಿಸ್ ನೀಡಿ ಬಿಡುಗಡೆಗೊಳಿಸಿದೆ. ಆದರೆ, ಬರುವ ಬುಧವಾರದಂದು ಕಂಪನಿಯವರು ಇದಕ್ಕೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ, ಸಮರ್ಪಕ ಸ್ಪಷ್ಟನೆ ನೀಡದಿದ್ದಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ.
- ಸಾಂಪ್ರದಾಯಿಕ ಉಡುಪು ತೊಟ್ಟು ಶಿವಮೊಗ್ಗ ಸಿಟಿಯಲ್ಲಿ ಅಧಿಕಾರಿಗಳ ಮೆರವಣಿಗೆ, ಹೇಗಿತ್ತು? ಕಾರಣವೇನು?
- ಶಿವಮೊಗ್ಗದಲ್ಲಿ ಚುನಾವಣೆ ದಿನ ಶುಭಂ ಹೊಟೇಲ್ನಲ್ಲಿ ತಿಂಡಿ ಫ್ರೀ, ಕಂಡೀಷನ್ ಒಂದೇ
- ಶಿವಮೊಗ್ಗಕ್ಕೆ 3 ವಿಶೇಷ ವಿಮಾನದಲ್ಲಿ ಗಣ್ಯರು, ರಾಹುಲ್ ಗಾಂಧಿ ಪಿಟ್ನೆಸ್ಗೆ ಶಿವಣ್ಣ ಫಿದಾ, ವೇದಿಕೆ ಕೆಳಗೆ ಉಳಿದ ಗೀತಾ
- ಮೈಸೂರು – ತಾಳಗುಪ್ಪ ಸೇರಿ ರಾಜ್ಯದ ವಿವಿಧೆಡೆಗೆ ಚುನಾವಣೆಗಾಗಿ ವಿಶೇಷ ರೈಲು, ಟೈಮಿಂಗ್ ಏನು?
- ಅಡಿಕೆ ಧಾರಣೆ | 2 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]