ಮಲವಗೊಪ್ಪದಲ್ಲಿ ರೌಡಿ ಶೀಟರ್ ಕಾಲಿಗೆ ಗುಂಡಿಕ್ಕಿದ ಪೊಲೀಸ್, ಹೇಗಾಯ್ತು ಘಟನೆ? ಯಾರು ಗೊತ್ತಾ ರೌಡಿ ಶೀಟರ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 11 ಮಾರ್ಚ್ 2020

ಮತ್ತೊಬ್ಬ ರೌಡಿ ಶೀಟರ್ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡಿಕ್ಕಿದ್ದಾರೆ. ಪೊಲೀಸರ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಇನ್ಸ್’ಪೆಕ್ಟರ್ ಒಬ್ಬರು ಹಾರಿಸಿದ ಗುಂಡು, ರೌಡಿ ಶೀಟರ್ ಕಾಲಿಗೆ ಹೊಕ್ಕಿದೆ.

89037219 1071930726501680 3177394549060272128 o.jpg? nc cat=100& nc sid=8024bb& nc eui2=AeH5q7KMNDArVWgZ3FfgaKzBa3KgNJHUPy9KWB5uGyby L5iL9kngqwGaRMg2NqJrEKlU1W7eNZREk9ImWt59TCeWrKiI7wdbhcq7RcB7F6PMA& nc ohc=1uctSzAFdh0AX9eEDPD& nc ht=scontent.fblr11 1
Rowdy Sheeter Sainadi Lakshman

ಯಾರದು ರೌಡಿ ಶೀಟರ್? ಈಗ ಹೇಗಿದೆ ಪರಿಸ್ಥಿತಿ?

ರೌಡಿ ಶೀಟರ್ ಸೈನಾದಿ ಲಕ್ಷಣ್ ಎಡಗಾಲಿಗೆ ಗುಂಡು ಹಾರಿಸಲಾಗಿದೆ. ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೇಗಾಯ್ತು ಘಟನೆ?

ರೌಡಿ ಶೀಟರ್ ಸೈನಾದಿ ಲಕ್ಷಣ್ ವಿರುದ್ಧ ಹಲವು ಪ್ರಕರಣಗಳಿದ್ದವು. ಈತ ಬೆಂಗಳೂರಿನಲ್ಲಿರುವ ಮಾಹಿತಿ ತಿಳಿಯುತ್ತಿದ್ದಂತೆ ರೌಡಿ ನಿಗ್ರಹ ಪಡೆ ಪೊಲೀಸರು ದಾಳಿ ನಡೆಸಿ, ಬಂಧಿಸಿದ್ದರು. ಶಿವಮೊಗ್ಗಕ್ಕೆ ಕರೆ ತರುವಾಗ ಮಲವಗೊಪ್ಪ ಬಳಿ ಮೂತ್ರ ವಿಸರ್ಜನೆ ಮಾಡುವ ನೆಪ ಹೇಳಿದ್ದಾನೆ. ವಾಹನದಿಂದ ಕೆಳಗಿಳಿಯುತ್ತಿದ್ದಂತೆ ಸೈನಾದಿ ಲಕ್ಷ್ಮಣ್, ಕೈಗೆ ಹಾಕಲಾಗಿದ್ದ ಚೈನ್’ನಿಂದ ರೌಡಿ ನಿಗ್ರಹ ಪಡೆ ಮುಖ್ಯ ಪೇದೆ ಹರ್ಷ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಎಸ್ಕೇಪ್ ಆಗಲು ಯತ್ನಿಸಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.

89079702 1071930766501676 8122950262559080448 o.jpg? nc cat=107& nc sid=8024bb& nc eui2=AeFVH Y16aCDczF m6Pq2A4nhpMDoA3qFo8QPkTTIyqcFOPBA3qQyfCf iDvcYJoTIlT2gbKZYqcS9qwLVDtzd8kCmQhq70cPySqnDY99zSv2A& nc ohc=T0YofsrxTuoAX80seYF& nc ht=scontent.fblr11 1

ವಾರ್ನಿಂಗ್ ಫೈರ್ ಮಾಡಿದ ಪೊಲೀಸ್

ಸೈನಾದಿ ಲಕ್ಷ್ಮಣ್ ಎಸ್ಕೇಪ್ ಆಗಲು ಯತ್ನಿಸಿದಾಗ ರೌಡಿ ನಿಗ್ರಹ ಪಡೆ ಇನ್ಸ್’ಪೆಕ್ಟರ್ ಗುರುರಾಜ್ ಅವರು ವಾರ್ನಿಂಗ್ ನೀಡಿದ್ದಾರೆ. ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ಇದಕ್ಕೂ ಕ್ಯಾರೆ ಅನ್ನದೆ ಸೈನಾದಿ ಲಕ್ಷ್ಮಣ್ ಓಡುತ್ತಿದ್ದಾಗ, ಕಾಲಿಗೆ ಗುಂಡು ಹಾರಿಸಿದ್ದಾರೆ.

89066702 1071931199834966 8501885537638940672 o.jpg? nc cat=101& nc sid=8024bb& nc eui2=AeHd2WdXlbTz Pc8UmYbFCTrvYGSbKyXxTJorJ 5YrZo4UhQO SJO1wyGFNlrxpCGV xkKiUY1XrkTgaQK72yW66xSBghkdyX jD sQdJd0lCw& nc ohc=c0rAWtmbhg0AX nzJlg& nc ht=scontent.fblr11 1
CPI Gururaj

ಯಾರವನು ಸೈನಾದಿ ಲಕ್ಷಣ್?

ರೌಡಿ ಶೀಟರ್ ಸೈನಾದಿ ಲಕ್ಷ್ಮಣ್ ರೌಡಿ ಶೀಟರ್ ಮಾರ್ಕೆಟ್ ಲೋಕಿಯ ಸಹಚರ. ಈತನ ವಿರುದ್ಧ ಹಲವು ಪ್ರಕರಣಗಳಿವೆ. 2006ರಲ್ಲಿ ಲವ ಕುಶ ಡಬಲ್ ಮರ್ಡರ್ ಕೇಸ್, 2015ರಲ್ಲಿ ರೌಡಿ ಶೀಟರ್ ಮೋಟಿ ವೆಂಕಟೇಶ್ ಹತ್ಯೆ ಪ್ರಕರಣ, 2017ರಲ್ಲಿ ಕೋಕ ಕೇಸ್, 2018ರಲ್ಲಿ ಮಾರ್ಕೆಟ್ ಗಿರಿ ಹತ್ಯೆ ಪ್ರಕರಣದ ಆರೋಪಿಯಾಗಿದ್ದಾನೆ. ಮಾರ್ಕೆಟ್ ಗಿರಿ ಹತ್ಯೆಯ ಬಳಿಕ ಸೈನಾದಿ ಲಕ್ಷ್ಮಣ್ ತಲೆ ಮರೆಸಿಕೊಂಡಿದ್ದ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸ್ಪಷ್ಟಪಡಿಸಿದ್ದಾರೆ.  

89224139 1071931089834977 6592397155770564608 o.jpg? nc cat=103& nc sid=8024bb& nc eui2=AeENrV iJHBg75XXS4aBfidHkYSn8YAtUMvhyG7Eco93OcR6Sn1VqR78pktdhjpCnYF67Y55oGloReWqTVII igb5gy9qARFKm0MzmAkMQgzqw& nc ohc=y6TN8NHd8q8AX FrYKL& nc ht=scontent.fblr11 1
Injured Head Constable Harsha

ಗಾಯಗೊಂಡಿದ್ದ ಮುಖ್ಯ ಪೇದೆಗೆ ಚಿಕಿತ್ಸೆ

ಸೈನಾದಿ ಲಕ್ಷ್ಮಣ್ ಎಸ್ಕೇಪ್ ಆಗುವ ಹಂತದಲ್ಲಿ ಮುಖ್ಯ ಪೇದೆ ಹರ್ಷ ಮೇಲೆ ಹಲ್ಲೆ ನಡೆಸಿದ್ದ. ಹರ್ಷ ಅವರ ತಲೆಗೆ ಗಾಯವಾಗಿದ್ದು, ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಿಗೂ ಚಿಕಿತ್ಸೆ ನಡೆಯುತ್ತಿದೆ.

ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಡಿವೈಎಸ್’ಪಿ ಉಮೇಶ್ ನಾಯ್ಕ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 11, 2020

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment