ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 15 ಮಾರ್ಚ್ 2020
ದಯವಿಟ್ಟು ಶಿವಮೊಗ್ಗಕ್ಕೆ ಬರಬೇಡಿ..! ರಾಜ್ಯ, ಹೊರ ರಾಜ್ಯದ ಪ್ರವಾಸಿಗರಿಗೆ ಶಿವಮೊಗ್ಗದ ಜನರ ಮನವಿ ಇದು.
ಕರೋನ ಸೋಂಕು ಹರಡುವುದು ತಡೆಗಟ್ಟಲು ಸರ್ಕಾರ ನಿರ್ಬಂಧ ಹೇರಿದೆ. ಈ ನಡುವೆ ಬೆಂಗಳೂರು ಸೇರಿದಂತೆ ವಿವಿಧೆಡೆಯ ಪ್ರವಾಸಿಗರು ಶಿವಮೊಗ್ಗದತ್ತ ಮುಖ ಮಾಡುತ್ತಿದ್ದಾರೆ. ರಜೆ ಇರುವುದರಿಂದ ಪ್ರವಾಸಿ ತಾಣಗಳನ್ನು ಕಣ್ತುಂಬಿಕೊಳ್ಳಲು ಮುಂದಾಗಿದ್ದಾರೆ. ಹಾಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಟೂರಿಸ್ಟ್’ಗಳೇ ಶಿವಮೊಗ್ಗಕ್ಕೆ ಬರಬೇಡಿ ಅನ್ನುವ ಮನವಿಗಳು ಕಾಣಸಿಗುತ್ತಿವೆ.
ಹುಲಿ, ಸಿಂಹಧಾಮ ಬಂದ್
ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಮುಖ ಪ್ರವಾಸಿ ತಾಣ ಹುಲಿ ಮತ್ತು ಸಿಂಹಧಾಮವನ್ನು ಬಂದ್ ಮಾಡಲಾಗಿದೆ. ಮಾರ್ಚ್ 15 ರಿಂದ 23ರವರೆಗೆ ಹುಲಿ, ಸಿಂಹಧಾಮ ಬಂದ್ ಮಾಡಲಾಗುತ್ತಿದೆ ಎಂದು ಸಫಾರಿಯ ಕಾರ್ಯಕಾರಿ ನಿರ್ವಾಹಕ ಮುಕುಂದ್ ಚಂದ್ರ ತಿಳಿಸಿದ್ದಾರೆ.

ಶಾಲೆ, ಕಾಲೇಜುಗಳಿಗೆ ರಜೆ ಇರುವುದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಳ ಆಗಬಹುದು. ಹೊರ ಜಿಲ್ಲೆ, ರಾಜ್ಯದಿಂದಲು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಆದರೆ ರಾಜ್ಯ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದರೆ ಸಮಸ್ಯೆಯಾಗಲಿದೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮವನ್ನು ಬಂದ್ ಮಾಡಲಾಗುತ್ತದೆ ಎಂದು ಮುಕುಂದ್ ಚಂದ್ರ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

About The Editor
ನಿತಿನ್ ಆರ್.ಕೈದೊಟ್ಲು















