ನೀರು, ಬಿಸ್ಕೇಟ್ ತಿಂದು ಬದುಕುತ್ತಿದ್ದೇವೆ, ಈಗ ಉಳಿಯಲು ಜಾಗವಿಲ್ಲ, ರಾತ್ರಿ ಆದ್ಮೇಲೆ ನಡೆದುಕೊಂಡೇ ಊರಿಗೆ ಹೋಗ್ತೀವಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 30 ಮಾರ್ಚ್ 2020

‘ಮೂರು ದಿನದಿಂದ ಬಿಸ್ಕೇಟ್ ತಿಂದು ಬದುಕುತ್ತಿದ್ದೇವೆ. ಉಳಿಯಲು ಜಾಗವಿಲ್ಲ. ಲಾಡ್ಜ್’ನವರು ಹೊರಗೆ ಹೋಗಿ ಎಂದಿದ್ದಾರೆ. ಈಗ ಡಿಸಿ ಆಫೀಸ್ ಮುಂದೆಯೆ ಇರಬೇಕಾಗಿದೆ. ರಾತ್ರಿವರೆಗು ಕಾದು ನೋಡುತ್ತೇವೆ. ಆನಂತರ ನಡೆದುಕೊಂಡೇ ಊರಿಗೆ ಹೋಗುತ್ತೇವೆ..’

ಶಿವಮೊಗ್ಗದಲ್ಲಿ ಗೊಂಬೆ ಮಾರಲು ಬಂದಿದ್ದ ಉತ್ತರ ಪ್ರದೇಶದ ಯುವಕರ ಆತಂಕದ ಮಾತುಗಳಿವು. ಮಾರ್ಚ್ 10ರಂದು ಈ ಯುವಕರು ಶಿವಮೊಗ್ಗಕ್ಕೆ ಬಂದಿದ್ದಾರೆ. ಇನ್ನೇನು ವ್ಯಾಪಾರ ಆರಂಭಿಸಬೇಕು ಅನ್ನುವ ಹೊತ್ತಿಗೆ ಕರೋನ ಲಾಕ್’ಡೌನ್ ಶುರುವಾಗಿತ್ತು. ಹಾಗಾಗಿ ಉತ್ತರ ಪ್ರದೇಶದ ಆಗ್ರಾದಿಂದ ಬಂದಿರುವ ಗೊಂಬೆ ಮಾರಾಟಗಾರರು ಶಿವಮೊಗ್ಗದಲ್ಲಿಯೇ ಸಿಕ್ಕಿಬಿದ್ದಿದ್ದಾರೆ.

ಲಾಡ್ಜ್ ಖಾಲಿ ಮಾಡಬೇಕಾದ ಒತ್ತಡ

ಶಿವಮೊಗ್ಗದ ಲಾಡ್ಜ್’ನಲ್ಲಿ ಉಳಿದುಕೊಂಡಿದ್ದ ಉತ್ತರ ಪ್ರದೇಶದ ಗೊಂಬೆ ಮಾರಾಟಗಾರರಿಗೆ, ಹಣದ ಕೊರತೆ ಎದುರಾಗಿದೆ. ಲಾಡ್ಜ್ ಖಾಲಿ ಮಾಡಿ ಎಂದು ಮಾಲೀಕರು ಸೂಚಿಸಿದ್ದಾರೆ. ಹಾಗಾಗಿ ಉಳಿಯಲು ಜಾಗವಿಲ್ಲದಂತಾಗಿದೆ. ಮತ್ತೊಂದೆಡೆ ತಮ್ಮೂರಿಗೆ ತೆರಳಲು ಆಗುತ್ತಿಲ್ಲ. ಹಾಗಾಗಿ ಅನುಮತಿ ಪತ್ರಕ್ಕಾಗಿ ಮೂರ್ನಾಲ್ಕು ದಿನದಿಂದ ಜಿಲ್ಲಾಧಿಕಾರಿ ಕಚೇರಿಗೆ ಬಂದು ಹೋಗುತ್ತಿದ್ದಾರೆ.

ಪಾಸ್ ಸಿಗದೆ ಪರದಾಟ

ಉತ್ತರ ಪ್ರದೇಶದಿಂದ ಲಾರಿಯಲ್ಲಿ ಬಂದಿರುವ ಯುವಕರು, ಈಗ ಅದೇ ಲಾರಿಯಲ್ಲಿ ಹಿಂತಿರುಗಲು ಸಿದ್ಧವಿದ್ದಾರೆ. ಆದರೆ ಕರೋನ ಲಾಕ್’ಡೌನ್ ಪರಿಣಾಮ ಯಾರೂ ಓಡಾಡುವಂತಿಲ್ಲ. ಹಾಗಾಗಿ ಜಿಲ್ಲಾಧಿಕಾರಿ ಅವರು ಅನುಮತಿ ಪತ್ರ ಕೊಟ್ಟರೆ ನೆಮ್ಮದಿಯಾಗಿ ಊರು ಸೇರಬಹುದು ಅನ್ನುವುದು ಯುವಕರ ಯೋಚನೆ.

ಆದರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅನುಮತಿ ಪತ್ರ ಅಥವಾ ಪಾಸ್ ನೀಡುವುದನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಇದರಿಂದ ಯುವಕರು ದಿಕ್ಕು ತೋಚದಂತಾಗಿದ್ದಾರೆ. ಹಾಗಾಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಶೆಡ್’ನಲ್ಲಿ ಕುಳಿತಿದ್ದಾರೆ. ಸಂಜೆವರೆಗೂ ಕಾದು ನೋಡಿ, ಬಳಿಕ ನಡೆದುಕೊಂಡೇ ಉತ್ತರ ಪ್ರದೇಶಕ್ಕೆ ತೆರಳಲು ನಿರ್ಧರಿಸಿದ್ದಾರೆ.

https://www.facebook.com/liveshivamogga/videos/525164848421801/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 30, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment