ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 1 ಏಪ್ರಿಲ್ 2020
ಕರೋನ ಲಾಕ್’ಡೌನ್ ಹಿನ್ನೆಲೆಯಲ್ಲಿ ಆಹಾರ ಸಿಗದೆ ಕೂಲಿ ಕಾರ್ಮಿಕರು, ನಿರ್ಗತಿಕರು ಒದ್ದಾಡುತ್ತಿದ್ದಾರೆ. ಹಸಿವು ತಾಳದೆ ಒದ್ದಾಡುತ್ತಿದ್ದವರಿಗೆ, ಕೆಲವು ಸಂಘ ಸಂಸ್ಥೆಗಳು, ಸಾರ್ವಜನಿಕರು ಊಟ, ತಿಂಡಿ ಒದಗಿಸುತ್ತಿದ್ದಾರೆ. ಇನ್ಮುಂದೆ ಹೀಗೆ ಮಾಡಿದರೆ, ಕೇಸ್ ದಾಖಲಿಸಲಾಗುತ್ತದೆ ಅಂತಾ ಶಿವಮೊಗ್ಗ ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಟಾರೆ, ಯಾವುದೇ ಕಾರಣಕ್ಕೂ ಸಂಘ ಸಂಸ್ಥೆಗಳು, ಸಾರ್ವಜನಿಕರು, ಕೂಲಿ ಕಾರ್ಮಿಕರಿಗೆ, ನಿರ್ಗತಿಕರಿಗೆ ಊಟ ನೀಡುವಂತಿಲ್ಲ. ಆಹಾರ ಸಾಮಗ್ರಿಗಳ ಕಿಟ್ ಕೂಡ ವಿತರಿಸುವಂತಿಲ್ಲ ಎಂದು ಆದೇಶಿಸಿದ್ದಾರೆ.
ಪಾಲಿಕೆಗೆ ತಂದು ತಲುಪಿಸಿ
ಆಹಾರ ಸಾಮಗ್ರಿ ಅಥವಾ ಆಹಾರವನ್ನು ನೇರವಾಗಿ ವಿತರಿಸುವ ಬದಲು ಮಹಾನಗರ ಪಾಲಿಕೆಗೆ ತಂದು ಕೊಟ್ಟು, ಸ್ವೀಕೃತಿ ಪಡೆಯಬೇಕು ಎಂದು ಸೂಚಿಸಿದ್ದಾರೆ. ಒಂದು ವೇಳೆ ಲಾಕ್’ಡೌನ್ ನಿರ್ದೇಶನ ಉಲ್ಲಂಘಿಸಿ ಆಹಾರ, ಆಹಾರ ಸಾಮಗ್ರಿ ವಿತರಿಸಿದರೆ ಐಪಿಸಿ ಸೆಕ್ಷನ್ 269, 270, 271 ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಕಮಿಷನರ್ ಆದೇಶಕ್ಕೆ ತೀವ್ರ ವಿರೋಧ
ಇನ್ನು, ಕಮಿಷನರ್ ಆದೇಶದಕ್ಕೆ ಸಂಘ ಸಂಸ್ಥೆಗಳು, ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡುವ ಕುರಿತು ಯೋಜಿಸಿದ್ದಾರೆ. ಶಿವಮೊಗ್ಗದ ನಗರದ ಹಲವು ಕಡೆಗೆ ಈಗಲು ನಿರ್ಗತಿಕರು ಇದ್ದಾರೆ. ಇವರಿಗೆ ಸಂಘ, ಸಂಸ್ಥೆಗಳು, ಸಾರ್ವಜನಿಕರೆ ತಿಂಡಿ, ಊಟ ನೀಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಮಿಷನರ್ ಆದೇಶಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















