ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 4 ಏಪ್ರಿಲ್ 2020
ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಸಾಗರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ. ಮತ್ತೊಬ್ಬ ಆರೋಪಿ ಎಸ್ಕೇಪ್ ಆಗಿದ್ದಾನೆ.
ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಉಳುವಿಯಿಂದ ಸಾಗರದ ಕಡೆಗೆ ಬೈಕ್’ನಲ್ಲಿ ತೆರೆಳುತ್ತಿದ್ದ ಇಬ್ಬರ ಮೇಲೆ ದಾಳಿ ನಡೆಸಿ, ಒಂದು ಕೆ.ಜಿ. ನೂರು ಗ್ರಾಂ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಬೈಕ್ ಚಲಾಯಿಸುತ್ತಿದ್ದ ಸೊರಬ ತಾಲೂಕಿನ ಉಳವಿ ಗ್ರಾಮದ ಜನತಾ ಕಾಲೋನಿ ನಿವಾಸಿ ತಾಹಿರ್ ಅಹ್ಮದ್ (26)ನನ್ನು ಪೊಲೀಸರು ಬಂಧಿಸಿದ್ದಾರೆ.
ಎಸ್ಕೇಪ್ ಆದ ಮತ್ತೊಬ್ಬ ಆರೋಪಿ
ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಆರೋಪಿ ಎಸ್ಕೇಪ್ ಆಗಿದ್ದಾನೆ. ಆತನನ್ನು ಶೌಕತ್ ಅಲಿ (68) ಎಂದು ತಿಳಿದು ಬಂದಿದೆ. ಈತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇವರಿಂದ ಒಂದು ಕೆ.ಜಿ. ನೂರು ಗ್ರಾಂ ಒಣ ಗಾಂಜಾ, ಕೃತ್ಯಕ್ಕೆ ಬಳಿಸಿದ ಬೈಕನ್ನು ವಶಕ್ಕೆ ಪಡೆಯಲಾಗಿದೆ. ಶೌಕತ್ ಅಲಿ ಮತ್ತು ತಾಹಿರ್ ಅಹ್ಮದ್ ಅಪ್ಪ, ಮಗ ಎಂದು ತಿಳಿದು ಬಂದಿದೆ.
ಸಾಗರ ಗ್ರಾಮಾಂತರ ಠಾಣೆ ಸಬ್’ಇನ್ಸ್’ಪೆಕ್ಟರ್ ಭರತ್ ಕುಮಾರ್, ಎಎಸ್ಐ ಸಿದ್ದರಾಮಪ್ಪ, ಸಿಬ್ಬಂದಿ ಫೈರೋಜ್ ಅಹ್ಮದ್, ತಾರಾನಾಥ್, ಗಿರೀಶ್ ಬಾಬು, ಪ್ರಕಾಶ್ ಅಂಬ್ಲಿ, ರವಿಕುಮಾರ್, ಅಶೋಕ್, ರಘು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






