ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ


ಶಿವಮೊಗ್ಗ ಲೈವ್.ಕಾಂ | SHIMOGA | 13 ಏಪ್ರಿಲ್ 2020
ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ ಮತ್ತಿಬ್ಬರಲ್ಲಿ ಕೆಎಫ್ಡಿ ಸೋಂಕು ದೃಢವಾಗಿದೆ. ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತೀರ್ಥಹಳ್ಳಿ ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡಿನಬೈಲು ಗ್ರಾಮದ ಭಾರತಿ (49) ಎಂಬುವವರಲ್ಲಿ ಕೆಎಫ್ಡಿ ಸೋಂಕು ಇರುವುದು ದೃಢವಾಗಿದೆ. ಇವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ಸೇರಿಸಲಾಗಿದೆ.

ಸಾಗರದಲ್ಲೂ ಒಂದು ಕೇಸ್ ಪತ್ತೆ
ಸಾಗರ ತಾಲೂಕಿನ ಮಹಿಳೆಯೊಬ್ಬರಿಗು ಕೆಎಫ್ಡಿ ದೃಢವಾಗಿದೆ. ಅರಳಗೋಡಿನ ಕಸಗುಪ್ಪೆ ಗ್ರಾಮದ ಚಂದ್ರಕಲಾ (50) ಅವರಿಗೆ ಸೋಂಕು ಇರುವುದು ದೃಢವಾಗಿದೆ. ಇವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶರಾವತಿ ಅಭಯಾರಣ್ಯ ಪ್ರವೇಶ ಬಂದ್
ಶರಾವತಿ ಅಭಯಾರಣ್ಯದ ಭಾರಂಗಿ ಹೋಬಳಿಯ ಅರಳಗೋಡು, ಜೋಗ – ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹೆನ್ನಿ ಶರಾವತಿ ವಲಯಾರಣ್ಯ ಪ್ರದೇಶದೊಳಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ಕೆಎಫ್ಡಿ ಬಾಧಿತ ಪ್ರದೇಶಗಳಾಗಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವನ್ಯಜೀವಿ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಪ್ರೀತಿ ರಾಮದಾಸ್ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com

LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು
















