ಸಾಗರದಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರನ್ನು ನಿಂದಿಸಿದ ಯುವಕನ ವಿರುದ್ಧ ಕೇಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SAGARA | 1 ಮೇ 2020

ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಹಿನ್ನೆಲೆ ಯುವಕನೊಬ್ಬನ ವಿರುದ್ಧ ಸಾಗರದಲ್ಲಿ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಇಲ್ಲಿನ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ.

ವೈದ್ಯರನ್ನು ನಿಂದಿಸಿದ್ಯಾರು? ಘಟನೆಗೇನು ಕಾರಣ?

ಸಾಗರ ಪಟ್ಟಣದ ಸಮೀರ್‌ ಎಂಬಾತ ತನ್ನ ಸಹೋದರನನ್ನು ಆಸ್ಪತ್ರೆಗೆ ಕರೆತಂದಿದ್ದ. ಸಹೋದರನ ಕಾಲಿಗೆ ಗಾಯವಾಗಿದ್ದು, ತುರ್ತು ಚಿಕಿತ್ಸೆ ನೀಡಬೇಕು ಎಂದು ಸಮೀರ್‌ ವೈದ್ಯರನ್ನು ಒತ್ತಾಯಿಸಿದ. ಈ ವೇಳೆ ಕೀಲು ಮತ್ತು ಮೂಳೆ ತಜ್ಞ ಡಾ.ಪರಪ್ಪ ಅವರು ಕರೋನ ತಪಾಸಣೆಯಲ್ಲಿ ನಿರತವಾಗಿದ್ದರು. ಹಾಗಾಗಿ ಸರದಿಯಲ್ಲಿ ಬರುವಂತೆ ಸಮೀರ್‌ಗೆ ಸೂಚಿಸಿದರು.

ಇದರಿಂದ ಆಕ್ರೋಶಗೊಂಡ ಸಮೀರ್‌ ವೈದ್ಯರನ್ನು ನಿಂದಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಸಾಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಯಲ್ಲಿ ಸಮೀರ್‌ನನ್ನು ಬಂಧಿಸಲಾಗಿದೆ.

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 1, 2020

Leave a Comment