
ಶಿವಮೊಗ್ಗ ಲೈವ್.ಕಾಂ | SHIMOGA | 1 ಮೇ 2020
ಅಧಿಕಾರ ವಹಿಸಿಕೊಂಡು ಕೆಲವೇ ಗಂಟೆಯಲ್ಲಿ ತಹಶೀಲ್ದಾರ್ ಅವರು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ.
ಶಿವಮೊಗ್ಗದ ನೂತನ ತಹಶೀಲ್ದಾರ್ ನಾಗರಾಜ್ ಅವರು ಏಪ್ರಿಲ್ 30ರಂದು ಅಧಿಕಾರ ವಹಿಸಿಕೊಂಡಿದ್ದರು. ಇವತ್ತು ಸಾರ್ವಜನಿಕ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಂಡು ಹೊರ ಬರುತ್ತಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ತಹಶೀಲ್ದಾರ್ ನಾಗರಾಜ್ ಅವರು ಭೇಟಿಯಾದರು.
ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಪರಿಚಯಿಸಿಕೊಂಡ ನೂತನ ತಹಶೀಲ್ದಾರ್ ಅವರು, ಮೊದಲಿಗೆ ಕೈ ಮುಗಿಸಿದರು. ಬಳಿಕ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು. ಸಾರ್ವಜನಿಕವಾಗಿ ತಹಶೀಲ್ದಾರ್ ಅವರು ಸಚಿವರ ಕಾಲಿಗೆ ಬದ್ದಿದ್ದು ಆಕ್ಷೇಪಕ್ಕೆ ಕಾರಣವಾಗಿದೆ.
ಶಿವಮೊಗ್ಗದಲ್ಲಿ ತಹಶೀಲ್ದಾರ್ ಆಗಿದ್ದ ಗಿರೀಶ್ ಅವರನ್ನು ದಾವಣಗೆರೆಗೆ ವರ್ಗಾವಣೆ ಮಾಡಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗರಿಯಲ್ಲಿ ತಹಶೀಲ್ದಾರ್ ಅಗಿದ್ದ ನಾಗರಾಜ್ಅವರನ್ನು ಶಿವಮೊಗ್ಗಕ್ಕೆ ವರ್ಗಾಯಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200