ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 15 ಮೇ 2020
ಮತ್ತೊಂದು ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಿದ್ದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ. ಈಗ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗ ಸಂಖ್ಯೆ ಒಂಭತ್ತಕ್ಕೆ ಏರಿಕೆಯಾಗಿದೆ. ಈ ನಡವೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿಯೇ ಕರೋನ ಹರಡಿದೆಯೆ ಎಂಬ ಅನುಮಾನ ಮೂಡಿದೆ.
ಗ್ರೀನ್ ಜೋನ್ನಲ್ಲೇ ಉಳಿಯುತ್ತೆ ಶಿವಮೊಗ್ಗ
ಸೋಂಕಿತ ಪ್ರಕರಣಗಳು ಹೆಚ್ಚಳವಾಗುತ್ತಿದ್ದರೂ ಶಿವಮೊಗ್ಗ ಗ್ರೀನ್ ಜೋನ್ನಲ್ಲೆ ಉಳಿಯಲಿದೆ. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಶಿವಮೊಗ್ಗ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ಜಿಲ್ಲೆ ಈಗಲೂ ಗ್ರೀನ್ ಜೋನ್ನಲ್ಲೇ ಉಳಿಯಲಿದೆ. ಈಗ ಸೋಂಕಿತ ವ್ಯಕ್ತಿ ಬಂದಿರುವುದು ಮುಂಬೈನಿಂದ. ಹಾಗಾಗಿ ನಮ್ಮ ಜಿಲ್ಲೆ ಗ್ರೀನ್ ಜೋನ್ನಲ್ಲೇ ಇರುತ್ತದೆ ಎಂದು ತಿಳಿಸಿದ್ದಾರೆ.
ಟ್ರಾವಲ್ ಹಿಸ್ಟರಿ ಕೊಡಲು ನಿರಾಕರಣೆ
ತೀರ್ಥಹಳ್ಳಿಯಲ್ಲಿನ ಸೋಂಕಿತ ಪಿ995ನ ಟ್ರಾವಲ್ ಹಿಸ್ಟರಿ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿಲು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ನಿರಾಕರಿಸಿದರು. ಅಲ್ಲದೆ ಟ್ರಾವಲ್ ಹಿಸ್ಟರಿ ಕೊಡುವ ಜವಾಬ್ದಾರಿ ರಾಜ್ಯ ಸರ್ಕಾರದ್ದು ಎಂದು ಸ್ಪಷ್ಟಪಡಿಸಿದರು. ಈ ನಡುವೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಧ್ಯಾಹ್ನದ ಹೆಲ್ತ್ ಬುಲೆಟಿನ್ನಲ್ಲಿ, ಪಿ995 ಮುಂಬೈನಿಂದ ಶಿವಮೊಗ್ಗ ಜಿಲ್ಲೆಗೆ ಆಗಮಿಸಿರುವ ಮಾಹಿತಿ ಇದೆ.
ಪಿ995ನನ್ನು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇಡಲಿಲ್ಲವೇಕೆ?
ಹೊರ ಜಿಲ್ಲೆ ಮತ್ತು ಹೊರ ರಾಜ್ಯದಿಂದ ಬರುವವರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗುತ್ತಿದೆ. ಕೆಲವರನ್ನು ಮನೆಯಲ್ಲೇ ಕ್ವಾರಂಟೈನ್ ಮತ್ತು ಇನ್ನೂ ಕೆಲವರನ್ನು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅವರೇ ತಿಳಿಸಿದ್ದರು.
ಮೇ 10ರಂದು ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಕ್ಷ್ಮ ರಾಜ್ಯದಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್, ಸೂಕ್ಷ್ಮವಲ್ಲದ ರಾಜ್ಯದಿಂದ ಬರುವವರಿಗೆ ಹೋಂ ಕ್ವಾರಂಟೈನ್ನಲ್ಲಿ ಇರಿಸಲಾಗುತ್ತದೆ ಎಂದು ತಿಳಿಸಿದ್ದರು.
ಜನರನ್ನು ಕಾಡುತ್ತಿರುವ ಪ್ರಶ್ನೆಗಳು?
ಪಿ995 ಮುಂಬೈನಿಂದ ಬಂದಿದ್ದಾರೆ. ದೇಶದಲ್ಲೇ ಅತಿ ಹೆಚ್ಚು ಪಾಸಿಟಿವ್ ಪ್ರಕರಣಗಳು ಇರುವುದು ಮಹಾರಾಷ್ಟ್ರದಲ್ಲೇ. ಹಾಗಿದ್ದೂ ಪಿ995ನನ್ನು ಸಾಂಸ್ಥಿಕ ಕ್ವಾರಂಟೈನ್ ಬದಲು ಹೋಂ ಕ್ವಾರಂಟೈನ್ನಲ್ಲಿ ಇರಿಸಿದ್ದು ಏಕೆ?
ಆಶಾ ಕಾರ್ಯಕರ್ತೆ ಅವರು ಪಿ995 ಅವರ ಮನೆಗೆ ಹೋಗಿ ಎಚ್ಚರಿಕೆ ನೀಡಿ, ಕ್ವಾರಂಟೈನ್ನಲ್ಲಿ ಇರುವಂತೆ ಸೂಚಿಸಿ, ಮನೆ ಮುಂದೆ ಸೂಚನಾ ಫಲಕವನ್ನು ಅಂಟಿಸಿ ಬಂದಿದ್ದಾರೆ. ಆ ಸಂದರ್ಭದಲ್ಲೂ ಮುಂಬೈನಿಂದ ಬಂದಿದ್ದಾಗಿ ತಿಳಿಸಿದ್ದರೂ ಸಾಂಸ್ಥಿಕ ಕ್ವಾರಂಟೈನ್ ಮಾಡದೆ ಇದ್ದಿದ್ದು ಏಕೆ?
ಕೆಲವು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಗ್ರೀನ್ ಜೋನ್ ಪಟ್ಟಿಯಿಂದ ಶಿವಮೊಗ್ಗ ಜಿಲ್ಲೆ ಹೊರ ಬೀಳುವ ಆತಂಕ ಮೂಡಿದೆ. ಈ ಕುರಿತು ಜಿಲ್ಲಾಧಿಕಾರಿ ಸಮಗ್ರ ತನಿಖೆ ನಡೆಸುವ ಅಗತ್ಯತೆ ಇದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಎರಡು ವರ್ಷದ ಮನೆ ಮಾರಾಟಕ್ಕಿದೆ. GROUND FLOOR 2BHK, 1st FLOOR 1 BHK (ಎರಡು ಮನೆಗಳು), 2nd FLOOR BACHELOR ROOM WITH ATTACHED BATHROOM. ವಿಳಾಸ : ತರಳಬಾಳು ಲೇಔಟ್ ಪಕ್ಕ, ತಾವರೆಚಟ್ನಹಳ್ಳಿ, ಪೇಸ್ ಕಾಲೇಜು ಹತ್ತಿರ. ಹೊನ್ನಾಳಿ ರಸ್ತೆ, ಶಿವಮೊಗ್ಗ. ಹೆಚ್ಚಿನ ಮಾಹಿತಿಗೆ : 9972194422 ಜಾಹೀರಾತು
ಶಿವಮೊಗ್ಗದಲ್ಲಿ ಮನೆ ಮಾರಾಟಕ್ಕಿದೆ