ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಮೇ 2020
ಪೇಷೆಂಟ್ ನಂಬರ್ 1305 ಕೇಸ್ ಜಿಲ್ಲಾಡಳಿತಕ್ಕೆ ದೊಡ್ಡ ಸವಾಲಾಗಿದೆ. ಇವರಿಗೆ ಕರೋನ ಸೋಂಕು ತಗುಲಿದ್ದು ಹೇಗೆ ಅನ್ನುವುದು ಈತನಕ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಹಾಗಾಗಿ ಸೋಂಕು ಮತ್ತಷ್ಟು ಜನಕ್ಕೆ ಹರಡಬಹುದೆ ಎಂಬ ಅನುಮಾನ ಮೂಡಿದೆ.
ಶಿವಮೊಗ್ಗ ತಾಲೂಕು ಬಾಳೆಕೊಪ್ಪ ಗ್ರಾಮದ ಪಿ1305 ಅವರಿಗೆ ಸೋಂಕು ತಗುಲಿರುವ ಕುರಿತು ನಿನ್ನೆ ಸ್ಟೇಟ್ ಬುಲೆಟಿನ್ನಲ್ಲಿ ಪ್ರಕಟಿಸಲಾಗಿದೆ. ಇವರಿಗೆ 63 ವರ್ಷ ವಯಸ್ಸು. ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸೋಂಕು ತಗುಲಿದ್ದು ಹೇಗೆ?
ಪಿ1305 ಅವರು ಇತ್ತೀಚೆಗೆ ದಾವಣಗೆರೆ ಜಿಲ್ಲೆಗೆ ಹೋಗಿ ಬಂದಿದ್ದಾರೆ. ಚಿಕಿತ್ಸೆಗೆಂದು ಅಲ್ಲಿಗೆ ತೆರಳಿದ್ದರು. ಈ ವೇಳೆ ಸೋಂಕು ತಗುಲಿರುವ ಕುರಿತು ಅನುಮಾನವಿದೆ. ಆದರೆ ಇದು ಇನ್ನು ಖಚಿತಗೊಂಡಿಲ್ಲ. ದಾವಣಗೆರೆಗೆ ಹೋಗಿ ಬಂದಿದ್ದು ತಿಳಿದ ಬಳಿಕ ಇವರನ್ನು ಹೋಂ ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು. ಆದರೆ ಇದಕ್ಕೂ ಮೊದಲು ಪಿ1305 ಅವರು ಗ್ರಾಮದಲ್ಲೆಲ್ಲ ಓಡಾಡಿದ್ದರು.
ಗ್ರಾಮದ ಹಾಲಿನ ಡೈರಿಗೆ ಭೇಟಿ ನೀಡಿದ್ದರು ಎಂದು ಹೇಳಲಾಗುತ್ತಿದೆ. ಹಲವರನ್ನು ಭೇಟಿಯಾಗಿದ್ದರು ಎಂದು ತಿಳಿದು ಬಂದಿದೆ. ಈ ನಡುವೆ ಊಹಾಪೋಹಗಳು ಕೂಡ ಹಬ್ಬಿದೆ. ಇದರಿಂದ ಜನರು ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ.
ಅಧಿಕಾರಿಗಳಿಗೆ ತಲೆನೋವು ತಂದ ಕೇಸ್
ಪಿ1305 ಅವರ ಪ್ರಕರಣ ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತಕ್ಕೆ ತಲೆನೋವು ತಂದಿದೆ. ಸೋಂಕು ತಗುಲಿದ್ದು ಹೇಗೆ ಅನ್ನವುದನ್ನು ಪತ್ತೆ ಹಚ್ಚುವುದೆ ಕಷ್ಟವಾಗಿದೆ. ಒಂದು ವೇಳೆ ಸ್ಥಳೀಯವಾಗಿ ಕರೋನ ಸೋಂಕು ತಗುಲಿದ್ದರೆ ಇದು ದೊಡ್ಡ ಆತಂಕ ಸೃಷ್ಟಿಸಲಿದೆ. ಈ ಹಿನ್ನೆಲೆಯಲ್ಲಿ ಬಾಳೆಕೊಪ್ಪ ಗ್ರಾಮವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















