ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್, ಪೊಲೀಸ್ ಕ್ರಮ ಸರಿಯೋ ತಪ್ಪೋ ಸಂಪುಟದಲ್ಲಿ ಚರ್ಚೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಮೇ 2020

ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರನ್ನು ಆಧರಿಸಿ ಪಿಎಸ್‍ಐ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಎಫ್‍ಐಆರ್ ದಾಖಲಿಸಿರುವುದು ಸರಿಯೋ ತಪ್ಪೋ ಎಂಬ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಈಶ್ವರಪ್ಪ, ಕರೋನಾ ತಡೆಯಲು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ಒಂದಾಗಿ ಹೋರಾಟ ನಡೆಸುತ್ತಿರುವಾಗ ಸೋನಿಯಾಗಾಂಧಿ ನೀಡಿರುವ ಹೇಳಿಕೆ ದೇಶದ ಪ್ರತಿಯೊಬ್ಬರಿಗೂ ನೋವು ತಂದಿದೆ. ದೂರು ದಾಖಲಾದ ಕೂಡಲೇ ಎಫ್ ಐಆರ್ ದಾಖಲಿಸಬೇಕು ಎಂದಿಲ್ಲ. ಆದರೆ ಪೊಲೀಸ್ ಅಧಿಕಾರಿ ಎಫ್ ಐಆರ್ ದಾಖಲಿಸದಿದ್ದರೆ ತನ್ನ ಮೇಲೆಯೇ ಕ್ರಮ ಜರುಗಿಸುತ್ತಾರೆನೋ ಎಂಬ ಭಯದಲ್ಲಿ ಎಫ್ ಐಆರ್ ದಾಖಲಿಸಿರಬಹುದು ಎಂದರು.

Eshwarappa General Image 1

Eshwarappa MLA 1 1

ಸೋನಿಯಾ ಗಾಂಧಿ ಜನರ ಕ್ಷಮೆ ಕೇಳಬೇಕು ಎಂದು ನಾನು ಹೇಳುತ್ತಿಲ್ಲ. ಹಾಗೆಯೆ ಪೊಲೀಸ್ ಅಧಿಕಾರಿ ಎಫ್ ಐಆರ್ ದಾಖಲಿಸಿರುವುದು ಸರಿಯೋ ತಪ್ಪೋ ಎಂದೂ ನಾನು ಹೇಳುವುದಿಲ್ಲ ಎಂದು ಈಶ್ವರಪ್ಪ ಹೇಳಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Comment