ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA NEWS | 28 ಮೇ 2020
ನರಸೀಪುರದ ನಾಟಿ ವೈದ್ಯ ನಾರಾಯಣಮೂರ್ತಿ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿದ್ದರು. ಜನರಿಗೆ ಔಷಧಿ ಸಿಗುವಂತೆ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಇಲ್ಲಿಗೆ ಬರುವವರಿಗೆ ಯಾರೂ ಅಡ್ಡಿಪಡಿಸದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಮೇಘಾಲಯದ ಸಚಿವರಿಗೆ ಔಷಧ
ಲಾಕ್ಡೌನ್ ಸಂದರ್ಭದ ಮೇಘಾಲಯ ರಾಜ್ಯದ ಸಚಿವರೊಬ್ಬರು ಔಷಧ ಬೇಕು ಎಂದು ತಿಳಿಸಿದ್ದರು. ಆಪ್ತರೊಬ್ಬರ ಮೂಲಕ ಅವರಿಗೆ ಔಷಧ ಕಳುಹಿಸಿಲಾಗಿತ್ತು. ಕ್ಯಾನ್ಸರ್ ಗುಣವಾಗಿದೆ ಎಂದು ಅವರು ತಿಳಿಸಿದ್ದಾರೆ. ಇಲ್ಲಿನ ಪಾರಂಪರಿಕ ಔಷಧಿಯಿಂದ ಅನೇಕರಿಗೆ ಅನುಕೂಲವಾಗಿದೆ. ಈ ಬಗ್ಗೆ ನಂಬಿಕೆ ಇದ್ದವರಿಗೆ ಔಷಧ ನೀಡಲು ಯಾವುದೇ ಅಭ್ಯಂತರವಿಲ್ಲ ಎಂದು ಸಚಿವ ಈಶ್ವರಪ್ಪ ತಿಳಿಸಿದರು.
ಶೌಚಗೃಹ, ರಸ್ತೆ ನಿರ್ಮಾಣ
ಔಷಧಿಗಾಗಿ ಬೇರೆ ಬೇರೆ ಕಡೆಯಿಂದ ಜನರು ಬರುತ್ತಾರೆ. ಇಲ್ಲಿಗೆ ಬಂದವರು ಊರಿನ ವಾತಾವರಣ ಕಲುಷಿತಗೊಳಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಊರಿನಲ್ಲಿ ಮೂಲ ಸೌಕರ್ಯದ ಕೊರತೆ ಇದೆ. ಇದನ್ನು ಸರಿಪಡಿಸಲು ಶೌಚಗೃಹ, ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಹರತಾಳು ಹಾಲಪ್ಪ ಸ್ಪಷ್ಟಪಡಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















