ಹೊಟೇಲ್ ಉದ್ಯಮಕ್ಕಾಗಿ, ಸಂಬಂಧಿಕರ ಮನೆಗೆ ಹೋದವರಿಗೆ ಕರೋನ, 12 ಪಾಸಿಟಿವ್ ಕೇಸ್‌ನಲ್ಲಿ ಯಾವ್ಯಾವ ತಾಲೂಕಿನದ್ದೆಷ್ಟಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜೂನ್ 2020

ಮಹಾರಾಷ್ಟ್ರದಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ 12 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಇವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಯಾವಾಗ ಬಂದಿದ್ದು ಇವರು?

ಶಿವಮೊಗ್ಗಕ್ಕೆ ಬರುತ್ತಿದ್ದಂತೆ ಇವರನ್ನೆಲ್ಲ ಹೊಟೇಲ್ ಮತ್ತು ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಹಾಗಾಗಿ ಮತ್ಯಾರಿಗೂ ಸೋಂಕು ಹರಡಲು ಅವಕಾಶವಾಗಿಲ್ಲ. ಜೂನ್ 3, 4 ಮತ್ತು 5ರಂದು ಈ 12 ಮಂದಿ ಶಿವಮೊಗ್ಗಕ್ಕೆ ಬಂದಿದ್ದರು.

https://www.facebook.com/liveshivamogga/videos/2299124960381441/?t=4

ಯಾವ್ಯಾವ ತಾಲೂಕಿಗೆ ಸೇರಿದವರು?

7 ವರ್ಷದ ಬಾಲಕ ಸೇರಿ 12 ಮಂದಿಗೆ ಸೋಂಕು ತಗುಲಿದೆ. ಇವರಲ್ಲಿ ಐದು ಮಂದಿ ಶಿಕಾರಿಪುರ ತಾಲೂಕಿಗೆ ಸೇರಿದವರು. ನಾಲ್ಕು ಮಂದಿ ಹೊಸನಗರ ತಾಲೂಕು ರಿಪ್ಪನ್‍ಪೇಟೆಯವರು, ಸೊರಬದ ಮೂವರು ಇದ್ದಾರೆ.

ಹೊಟೇಲ್ ಉದ್ಯಮದಲ್ಲಿ ತೊಡಗಿದ್ದರು

ರಿಪ್ಪನ್‍ಪೇಟೆಯ ನಾಲ್ಕು ಮಂದಿ ಒಂದೆ ಕುಟುಂಬದವರು. ಪತಿ, ಪತ್ನಿ, ಮಕ್ಕಳಿಬ್ಬರು ಬಹು ವರ್ಷದಿಂದ ಮುಂಬೈನಲ್ಲಿದ್ದರು. ಹೊಟೇಲ್‍ ಉದ್ಯಮಿದಲ್ಲಿ ತೊಡಗಿಸಿಕೊಂಡಿದ್ದರು. ಪತ್ನಿಯ ತವರು ಮನೆ ರಿಪ್ಪನ್‍ಪೇಟೆಯಲ್ಲಿದೆ. ಹಾಗಾಗಿ ಅವರು ಪಾಸ್ ಪಡೆದು ಶಿವಮೊಗ್ಗಕ್ಕೆ ಆಗಮಿಸಿದ್ದರು. ಅದರೆ ಮುಂಬೈನಿಂದ ಬಂದವರಿಗೆ ಕ್ವಾರಂಟನ್ ಕಡ್ಡಾಯವಾಗಿರುವ ಹಿನ್ನೆಲೆ, ಇವರನ್ನು ಶಿವಮೊಗ್ಗದಲ್ಲಿ ಕ್ವಾರಂಟೈನ್‍ನಲ್ಲಿದ್ದರು.

ಸಂಬಂಧಿಗಳ ಮನೆಗೆ ಹೋಗಿದ್ದರು

ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ಆರು ಮಂದಿ ಮುಂಬೈನಿಂದ ಕಾರಿನಲ್ಲಿ ಹಿಂತಿರುಗಿದ್ದರು. ಇವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಈ ಪೈಕಿ ಅಜ್ಜಿ ಮತ್ತು ಮೊಮ್ಮಗಳು ಮುಂಬೈನಲ್ಲಿ ಇರುವ ಸಂಬಂಧಿಯೊಬ್ಬರ ಮನೆಗೆ ಹೊಗಿದ್ದರು. ಲಾಕ್‍ ಡೌನ್ ಆಗಿದ್ದರಿಂದ ಅಲ್ಲಿಯೇ ಉಳಿದುಕೊಂಡಿದ್ದರು.

ಎರಡು ಪ್ರತ್ಯೇಕ ಕಾರಿನಲ್ಲಿ ಸೊರಬಕ್ಕೆ ಬಂದವರನ್ನು ಹಾಸ್ಟೆಲ್‍ ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಹೊರಗಿನವರೊಂದಿಗೆ ಸಂಪರ್ಕ ಸಾಧಿಸಲು ಅವಕಾಶವಿರಲಿಲ್ಲ. ಇದರಿಂದ ಸೊರಬದ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಆಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 8, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment