ಶಿವಮೊಗ್ಗ ಲೈವ್.ಕಾಂ | SAGARA NEWS | 10 ಜೂನ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮುಂಬೈನಿಂದ ಬಂದಿದ್ದ ಯುವಕನೊಬ್ಬನಿಗೆ ಕರೋನ ಪಾಸಿಟಿವ್ ಬಂದ ಹಿನ್ನೆಲೆ, ಸಾಗರ ತಾಲೂಕಿನಲ್ಲಿ ಆತಂಕ ಮೂಡಿದೆ. ಮುಂಬೈನಿಂದ ರೈಲಿನಲ್ಲಿ ಬಂದಿದ್ದ ಈತ ಬೈಕ್ನಲ್ಲಿ ಮನೆ ಸೇರಿದ್ದ ಎಂದು ತಿಳಿದು ಬಂದಿದೆ. ಆ ಬಳಿಕ ಈತನಲ್ಲಿ ಸೋಂಕು ಕಾಣಿಸಿಕೊಂಡಿದೆ.
ಸಾಗರ ತಾಲೂಕಿನ ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ವರ್ಷದ ಯುವಕನಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಈತ ಮುಂಬೈನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಮಹಾರಾಷ್ಟ್ರದಿಂದ ರೈಲಿನ ಮೂಲಕ ಬೈಂದೂರಿಗೆ ಆಗಮಿಸಿದ್ದ. ಅಲ್ಲಿಂದ ಸಹೋದರನ ಬೈಕ್ನಲ್ಲಿ ಮನೆಗೆ ಬಂದಿದ್ದ.
ಆರೋಗ್ಯ ಇಲಾಖೆ ಅಧಿಕಾರಿಗಳು ದೌಡು
ಜೂನ್ 5ರಂದು ಯುವಕ ಊರಿಗೆ ಬಂದಿದ್ದ. ಮುಂಬೈನಿಂದ ಯುವಕನೊಬ್ಬ ಗ್ರಾಮಕ್ಕೆ ಬಂದಿರುವ ವಿಚಾರ ತಿಳಿದು ಮರುದಿನವೇ ಆರೋಗ್ಯ ಇಲಾಖೆ ಸಿಬ್ಬಂದಿ ಯುವಕನ ಮನೆಗೆ ದೌಡಾಯಿಸಿದ್ದರು. ಕೂಡಲೇ ಆತನನ್ನು ಶಿವಮೊಗ್ಗಕ್ಕೆ ಕರೆತಂದು ಕ್ವಾರಂಟೈನ್ಗೆ ಒಳಪಡಿಸಿ, ಗಂಟಲು ದ್ರವ ಪರೀಕ್ಷೆ ನಡೆಸಿದ್ದರು. ಇದರ ವರದಿ ಬಂದಿದ್ದು ಯುವಕನಿಗೆ ಕರೋನ ಪಾಸಿಟಿವ್ ಕಾಣಿಸಿಕೊಂಡಿದೆ.
ಮನೆಯವರೆಲ್ಲ ಕ್ವಾರಂಟೈನ್ಗೆ
ಇನ್ನು, ಯುವಕನಿಗೆ ಸೋಂಕು ತಗುಲಿರುವುದು ದೃಢವಾಗುತ್ತಿದ್ದಂತೆ ಕುಟುಂಬದ ಐವರನ್ನು ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ಸೂಚಿಸಲಾಗಿದೆ. ಇಡೀ ಮನೆಯನ್ನು ಅಧಿಕಾರಿಗಳು ಸ್ಯಾನಿಟೈಸ್ ಮಾಡಿದ್ದಾರೆ. ಆರೋಗ್ಯ ಸಮಸ್ಯೆ ಎದುರಾದರೆ ತಕ್ಷಣ ತಿಳಿಸುವಂತೆ ಸೂಚಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






