ಮುಂಬೈನಿಂದ ಭದ್ರಾವತಿಗೆ ಹಿಂತಿರುಗಿದ್ದ ಮಹಿಳೆಗೆ ಕರೋನ, ಕಾಗದನಗರದ ಒಂದು ಕ್ರಾಸ್ ಸೀಲ್ ಡೌನ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 24 ಜೂನ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮುಂಬೈಗೆ ಹೋಗಿ ಭದ್ರಾವತಿಗೆ ಹಿಂತಿರುಗಿದ್ದ ಮಹಿಳೆಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಭದ್ರಾವತಿಯ ಮತ್ತೊಂದು ಪ್ರದೇಶವನ್ನು ಸೀಲ್‍ ಡೌನ್ ಮಾಡಲಾಗಿದೆ.

ಬಾಣಂತನ ಮಾಡಲು ಹೋಗಿದ್ದರು

ಸಹೋದರಿಯ ಬಾಣಂತನ ಮಾಡಲು ಈ ಮಹಿಳೆ ಮುಂಬೈಗೆ ತೆರಳಿದ್ದರು. ಜೂನ್ 18ರಂದು ಇವರು ಭದ್ರಾವತಿಗೆ ಹಿಂತಿರುಗಿದ್ದರು. ಮುಂಬೈನಿಂದ ಹಿಂತಿರುಗಿದ್ದ ಕಾರಣ ಜೂ.19ರಂದು ಸಾರ್ವಜನಿಕ ಆಸ್ಪತ್ರೆಗೆ ಹೋಗಿ, ಸ್ವಪ್ರೇರಣೆಯಿಂದ ಕರೋನ ಪರೀಕ್ಷೆಗೆ ಒಳಗಾಗಿದ್ದರು. ಮುಂಬೈನಿಂದ ಬಂದಿದ್ದರಿಂದ ಇವರನ್ನು ವೈದ್ಯರು ಕ್ವಾರಂಟೈನ್‍ನಲ್ಲಿ ಇರಿಸಿದ್ದರು.

ಕುಟುಂಬದವರ ಮೇಲೆ ನಿಗಾ

ಸೋಂಕಿತ ಮಹಿಳೆ ಜೊತೆಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬದವರ ಮೇಲೆ ನಿಗಾ ವಹಿಸಲಾಗಿದೆ. ಅವರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಪತಿಯನ್ನು ಮಾತ್ರ ಪ್ರಾಥಮಿಕ ಸಂಪರ್ಕ ಎಂದು ಗುರುತಿಸಲಾಗಿದೆ.

104483415 1150731291954956 5703081927184819962 n.jpg? nc cat=101& nc sid=8024bb& nc ohc=8dgeuExHBhwAX9IP4LJ& nc ht=scontent.fixe1 1

ಏರಿಯಾ ಸೀಲ್ ಡೌನ್

ಮಹಿಳೆಗೆ ಕರೋನ ಕಾಣಿಸಿಕೊಂಡ ಹಿನ್ನೆಲೆ ಕಾಗದ ನಗರದಲ್ಲಿ ಮಹಿಳೆಯ ಮನೆ ಇರುವ ಕ್ರಾಸ್ ಅನ್ನು ಸೀಲ್ ಡೌನ್ ಮಾಡಲಾಗಿದೆ. ಈ ರಸ್ತೆಯಲ್ಲಿ ಜನ ಸಂಚಾರ ನಿರ್ಬಂಧಿಸಲಾಗಿದ್ದು, ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ಕಂಟೈನ್ಮೆಂಟ್ ಜೋನ್‍ಗೆ ಉಪ ವಿಭಾಗಾಧಿಕಾರಿ ಪ್ರಕಾಶ್, ತಹಶೀಲ್ದಾರ್ ಶಿವಕುಮಾರ್, ನಗರ ಸಭೆ ಪೌರಾಯುಕ್ತ ಮನೋಹರ್, ಪರಿಸರ ಎಂಜಿನಿಯರ್ ರುದ್ರೇಗೌಡ, ಟಿಹೆಚ್ಓ ಡಾ.ಎಂ.ಆರ್.ಗಾಯತ್ರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment