ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | AYANUR NEWS | 29 ಜೂನ್ 2020
ಸ್ನೇಹಿತರೊಂದಿಗೆ ಗೌಡನಕೆರೆಯಲ್ಲಿ ಈಜಲು ತೆರಳಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಕೆರೆಯಲ್ಲಿ ಮುಳುಗಿರುವ ಸಾದ್ಯತೆ ಇರುವುದರಿಂದ ಶೋಧ ಕಾರ್ಯ ನಡೆಸಲಾಯಿತು.
ಶಿವಮೊಗ್ಗದ ವೆಂಕಟೇಶನಗರದ ನಿವಾಸಿ ಸಂತೊಷ್ (38) ನಾಪತ್ತೆಯಾದವರು. ಸ್ನೇಹಿತರಾದ ಅಖಿಲೇಶ್, ವಿನಾಯಕ ಮತ್ತು ನವೀನ್ ಅವರ ಜೊತೆಗೆ ಸಂತೋಷ್ ಗೌಡನಕೆರೆಯಲ್ಲಿ ಈಜಲು ತೆರಳಿದ್ದರು.
ಹಣಗೆರೆಕಟ್ಟೆಗೆ ಹೋಗಿ ಬರುತ್ತಿದ್ದರು
ಎಲ್ಲರು ಆಟೋದಲ್ಲಿ ಹಣಗೆರೆಕಟ್ಟೆಗೆ ತೆರಳಿದ್ದರು. ಅಲ್ಲಿಂದ ಹಿಂತಿರುಗುವ ವೇಳೆ ಗೌಡನಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ಆಳವಾದ ಜಾಗದಲ್ಲಿ ಈಜುವಾಗ ಸಂತೋಷ್ ಕಣ್ಮರೆಯಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕತ್ತಲಾಗುವವರೆಗೂ ಶೋಧ ಕಾರ್ಯ
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಭಾನುವಾರ ಸಂಜೆವರೆಗೆ ಶೋಧ ಕಾರ್ಯ ನಡೆಸಿದರು. ಕತ್ತಲಾದ ಹಿನ್ನೆಲೆ ಶೋಧ ಕಾರ್ಯ ಸ್ಥಗಿತಗೊಳಿಸಲಾಯಿತು. ಎರಡು ಬೋಟ್ ಬಳಸಿ ಸಂತೋಷ್ ಮುಳುಗಿರುಬಹುದಾದ ಸ್ಥಳದಲ್ಲೆಲ್ಲ ಹುಡುಕಟ ಮಾಡಲಾಯಿತು. ಆದರೆ ಸಂತೋಷ್ ಪತ್ತೆಯಾಗಿಲ್ಲ.
ಸಂತೋಷ್ ಶಿವಮೊಗ್ಗದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು















