ಶಿವಮೊಗ್ಗ ಲೈವ್.ಕಾಂ | AYANUR NEWS | 29 ಜೂನ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸ್ನೇಹಿತರೊಂದಿಗೆ ಗೌಡನಕೆರೆಯಲ್ಲಿ ಈಜಲು ತೆರಳಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಕೆರೆಯಲ್ಲಿ ಮುಳುಗಿರುವ ಸಾದ್ಯತೆ ಇರುವುದರಿಂದ ಶೋಧ ಕಾರ್ಯ ನಡೆಸಲಾಯಿತು.
ಶಿವಮೊಗ್ಗದ ವೆಂಕಟೇಶನಗರದ ನಿವಾಸಿ ಸಂತೊಷ್ (38) ನಾಪತ್ತೆಯಾದವರು. ಸ್ನೇಹಿತರಾದ ಅಖಿಲೇಶ್, ವಿನಾಯಕ ಮತ್ತು ನವೀನ್ ಅವರ ಜೊತೆಗೆ ಸಂತೋಷ್ ಗೌಡನಕೆರೆಯಲ್ಲಿ ಈಜಲು ತೆರಳಿದ್ದರು.
ಹಣಗೆರೆಕಟ್ಟೆಗೆ ಹೋಗಿ ಬರುತ್ತಿದ್ದರು
ಎಲ್ಲರು ಆಟೋದಲ್ಲಿ ಹಣಗೆರೆಕಟ್ಟೆಗೆ ತೆರಳಿದ್ದರು. ಅಲ್ಲಿಂದ ಹಿಂತಿರುಗುವ ವೇಳೆ ಗೌಡನಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ಆಳವಾದ ಜಾಗದಲ್ಲಿ ಈಜುವಾಗ ಸಂತೋಷ್ ಕಣ್ಮರೆಯಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕತ್ತಲಾಗುವವರೆಗೂ ಶೋಧ ಕಾರ್ಯ
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಭಾನುವಾರ ಸಂಜೆವರೆಗೆ ಶೋಧ ಕಾರ್ಯ ನಡೆಸಿದರು. ಕತ್ತಲಾದ ಹಿನ್ನೆಲೆ ಶೋಧ ಕಾರ್ಯ ಸ್ಥಗಿತಗೊಳಿಸಲಾಯಿತು. ಎರಡು ಬೋಟ್ ಬಳಸಿ ಸಂತೋಷ್ ಮುಳುಗಿರುಬಹುದಾದ ಸ್ಥಳದಲ್ಲೆಲ್ಲ ಹುಡುಕಟ ಮಾಡಲಾಯಿತು. ಆದರೆ ಸಂತೋಷ್ ಪತ್ತೆಯಾಗಿಲ್ಲ.
ಸಂತೋಷ್ ಶಿವಮೊಗ್ಗದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





