ಶಿಕಾರಿಪುರದ ಬಹು ನಿರೀಕ್ಷಿತ ನಿರಾವರಿ ಯೋಜನೆ ಕಾಮಗಾರಿ ಪರಿಶೀಲಿಸಿದ ಸಂಸದ ರಾಘವೇಂದ್ರ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 29 ಜೂನ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿಕಾರಿಪುರ ತಾಲೂಕಿನ ಹಲವು ಭಾಗಕ್ಕೆ ನೀರು ಒದಗಿಸುವ ಉಡುಗಣಿ – ತಾಳಗುಂದ ಏತ ನೀರಾವರಿ ಯೋಜನೆ ಕಾಮಗಾರಿಯನ್ನು, ಇವತ್ತು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು. ಆ ಭಾಗದ ರೈತರನ್ನು ಕರೆಯಿಸಿ ಯೋಜನೆ ಕುರಿತು ಮಾಹಿತಿ ನೀಡಿದರು.

105488728 1155028841525201 2713707024356132612 n.jpg? nc cat=103& nc sid=110474& nc ohc=cqD04mJSi20AX8Zi5 9& nc ht=scontent.fblr11 1

ಎಲ್ಲಿ ನಡೆಯುತ್ತಿದೆ ಯೋಜನೆ?

ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕು ಚಟ್ನಹಳ್ಳಿ ಗ್ರಾಮದಲ್ಲಿ ಜಾಕ್ ವೆಲ್ ನಿರ್ಮಾಣ ಕಾಮಗಾರಿಯನ್ನು ಸಂಸದ ರಾಘವೇಂದ್ರ ಪರಿಶೀಲನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ಜಾಕ್ ವೆಲ್ ನಿರ್ಮಿಸಿ ಇಲ್ಲಿಂದ ನೀರನ್ನು ಪಂಪ್ ಮಾಡಿ ಶಿಕಾರಿಪುರ ತಾಲೂಕಿನ 186 ಕೆರೆಗಳಿಗೆ ಒಟ್ಟಾರೆ 1.5 ಟಿಎಂಸಿ ನೀರನ್ನು ತುಂಬಿಸಲಾಗುತ್ತದೆ ಎಂದು ತಿಳಿಸಿದರು.

ಎಷ್ಟು ಎಕರೆ ಜಾಗಕ್ಕೆ ಅನುಕೂಲವಾಗುತ್ತೆ?

ಈ ಯೋಜನೆಯಿಂದ ಶಿಕಾರಿಪುರ ತಾಲೂಕಿನ ಉಡುಗಣಿ, ತಾಳಗುಂದ, ಹೊಸೂರು ಮತ್ತು ತೊಗರ್ಸಿ ಭಾಗಕ್ಕೆ ನೀರು ಪೂರೈಕೆಯಾಗಲಿದೆ. ಇಲ್ಲಿನ 18 ಸಾವಿರ ಎಕರೆ ಜಮೀನಿಗೆ ನೀರು ಒದಗಿಸಲಾಗುತ್ತದೆ. ಇದರಿಂದ ಬರಗಾಲಪೀಡಿತ ಪ್ರದೇಶ ಎಂಬ ಅಪಖ್ಯಾತಿಯಿಂದ ಈ ಪ್ರದೇಶ ದೂರಾಗಲಿದೆ.

104605065 1155029138191838 7044037793000524488 n.jpg? nc cat=110& nc sid=110474& nc ohc=LkNjeaY5kkEAX T Ih& nc ht=scontent.fblr11 1

ಹೇಗೆ ಉಪಯೋಗ ಆಗಲಿದೆ?

ತುಂಗಭದ್ರ ನದಿಯಿಂದ ಜಾಕ್ ವೆಲ್‍ಗೆ ನೀರು ತುಂಬಿಸಿ, ಅಲ್ಲಿಂದ ಪೈಪ್‍ಗಳ ಮೂಲಕ ವಿವಿಧ ಕೆರೆಗಳಿಗೆ ನೀರು ಹರಿಸಲಾಗುತ್ತದೆ. ಇದರಿಂದ ಬೆಳೆ ಬೆಳೆಯಲು ಅನುಕೂಲ ಆಗಲಿದೆ. ಅಂತರ್ಜಲ ಮಟ್ಟವು ಹೆಚ್ಚಳವಾಗಬಹುದು ಎಂದು ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment