ಶಿವಮೊಗ್ಗ ಲೈವ್.ಕಾಂ | BHADRAVATHI NEWS | 30 ಜೂನ್ 2020
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಭದ್ರಾವತಿ ಸಿಟಿಯಲ್ಲಿ ಇವತ್ತು ಹಲವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ನಗರದ ಎರಡು ಕಡೆ ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಇದರಿಂದ ನಗರದಲ್ಲಿ ಆತಂಕ ಸೃಷ್ಟಿಯಾಗಿದೆ.

ಎಲ್ಲೆಲ್ಲಿ ಸೀಲ್ ಡೌನ್ ಆಗಿದೆ?
ಸುಭಾಷ್ ನಗರ | ಬಡಾವಣೆಯ ಮೂರು ರಸ್ತೆಗಳನ್ನು ಸದ್ಯಕ್ಕೆ ಸೀಲ್ ಡೌನ್
ಗಾಂಧಿನಗರ | ಮೊದಲಿಯಾರ್ ಸಮುದಾಯ ಭವನಕ್ಕೆ ತೆರಳುವ ಮುಖ್ಯ ರಸ್ತೆ ಸೀಲ್ ಡೌನ್
ಯಾರಿಗೆಲ್ಲ ಸೋಂಕು ತಗುಲಿದೆ?
ಗಾಂಧಿನಗರದ ಐದು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇವರಿಗೆ ಸೋಂಕು ತಗುಲಿದ್ದು ಹೇಗೆ ಅನ್ನುವುದು ಇನ್ನೂ ಖಚಿತವಾಗಿಲ್ಲ. ಮತ್ತೊಂದೆಡೆ ತಮಿಳುನಾಡಿನಿಂದ ಹೋಗಿ ಹಿಂತಿರುಗಿದ್ದ ಸುಭಾಷ್ ನಗರದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com

