ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಜುಲೈ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಇವತ್ತು ಸಿಟಿ ರೌಂಡ್ಸ್ ನಡೆಸಿದರು. ಭಾನುವಾರದ ಕರ್ಫ್ಯೂ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಶಿವಕುಮಾರ್, ಮುಖ್ಯ ರಸ್ತೆಗಳಲ್ಲಿ ಜನ ಸಂಚಾರ ಕಡಿಮೆ ಇದೆ. ಆದರೆ ಕೆಲವು ಬಡಾವಣೆಗಳಲ್ಲಿ ಜನರು ಓಡಾಡುತ್ತಿದ್ದಾರೆ. ಇದು ನಿಯಂತ್ರಣಕ್ಕೆ ಬರಬೇಕಿದೆ. ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಟೀ ಕುಡಿತಿದ್ದವರಿಗೆ ವಾರ್ನಿಂಗ್
ಜಿಲ್ಲಾಧಿಕಾರಿ ಅವರು ನಗರದ ವಿವಿಧೆಡೆ ಪರಿಶೀಲನೆಗೆ ತೆರಳಿದಾಗ ಕೆಲವರು ಅನಗತ್ಯವಾಗಿ ಓಡಾಡುವುದು ಕಂಡು ಬಂದಿದೆ. ಅವರನ್ನು ನಿಲ್ಲಿಸಿ ಪ್ರಶ್ನಿಸಿದಾಗ ಕೆಲವರು ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಇನ್ನೂ ಕೆಲವರು ತರಕಾರಿ ತರುವುದಕ್ಕೆ ಹೋಗುವುದಾಗಿ ಹೇಳಿದ್ದಾರೆ. ಇವರಿಗೆಲ್ಲ ಜಿಲ್ಲಾಧಿಕಾರಿ ಅವರು ತಿಳಿ ಹೇಳಿದ್ದಾರೆ. ಮತ್ತೊಂದೆಡೆ ಟೀ ಅಂಗಡಿ ಒಂದರಲ್ಲಿ ಜನರು ಟೀ ಕುಡಿಯುತ್ತ ಇದ್ದಿದ್ದನ್ನು ಗಮನಿಸಿದ ಡಿಸಿ, ಅಗತ್ಯ ಇದ್ದವರು ಮನೆಗೆ ಕೊಂಡೊಯ್ಯಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ನಗರದ ವಿವಿಧೆಡೆ ತೆರಳಿದ ಜಿಲ್ಲಾಧಿಕಾರಿ, ರಸ್ತೆಯಲ್ಲಿ ಓಡಾಡುವವರನ್ನು ತಡೆದು ವಿಚಾರಣೆ ಮಾಡಿದ್ದಾರೆ. ಸುಮ್ಮನೆ ಒಡಾಡುವವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






